<p>ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ಕ್ಯಾಂಪಸ್ನ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಹಾಗೂ ರ್ಯಾಗಿಂಗ್, ಮಾದಕ ವ್ಯಸನ ವಿರೋಧಿ ಮತ್ತು ಸೈಬರ್ ಭದ್ರತೆಯ ಕುರಿತು ಜಾಗೃತಿ ಕಾರ್ಯಕ್ರಮ ಮಂಗಳಾ ಸಭಾಂಗಣದಲ್ಲಿ ನಡೆಯಿತು.</p>.<p>ಕೊಣಾಜೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ ಎಸ್. ಮಾತನಾಡಿ, ರ್ಯಾಗಿಂಗ್ನಿಂದಾಗಿ ಆತಂಕ, ಖಿನ್ನತೆ, ಅಥವಾ ದೀರ್ಘಕಾಲದ ಮಾನಸಿಕ ಪರಿಣಾಮಗಳು ಉಂಟಾಗುತ್ತವೆ. ರ್ಯಾಗಿಂಗ್ ಮಾಡುವುದು ಗಮನಕ್ಕೆ ಬಂದರೆ ತಕ್ಷಣ ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗೆ, ರ್ಯಾಗಿಂಗ್ ವಿರೋಧಿ ಸಮಿತಿ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.</p>.<p>ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂಗೆ ವಿದ್ಯಾವಂತರು ಮತ್ತು ವೃತ್ತಿಪರರೂ ಸಿಲುಕುತ್ತಿದ್ದಾರೆ. ಅಪರಿಚಿತ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬಾರದು ಎಂದು ಮಾಹಿತಿ ನೀಡಿದರು.</p>.<p>ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಪ್ರಶಾಂತ ನಾಯ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.</p>.<p>ವಿಶ್ವವಿದ್ಯಾಲಯದ ಎಂಪ್ಲಾಯ್ಮೆಂಟ್ ಬ್ಯೂರೊದ ಮುಖ್ಯಸ್ಥ ದಶರಥ ಪಿ.ಅಂಗಡಿ ವೃತ್ತಿ ಮಾರ್ಗದರ್ಶನ ನೀಡಿದರು. ಡಿಎಸ್ಟಿ ಪರ್ಸ್ ಲ್ಯಾಬ್ನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳ ಬಗ್ಗೆ ಪ್ರೊ.ವಿಶಾಲಾಕ್ಷಿ ಬಿ.ಅವರು ಮಾಹಿತಿ ನೀಡಿದರು. ಲವೀನಾ <a href="">ಕೆ.ಬಿ</a>. ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ಕ್ಯಾಂಪಸ್ನ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಹಾಗೂ ರ್ಯಾಗಿಂಗ್, ಮಾದಕ ವ್ಯಸನ ವಿರೋಧಿ ಮತ್ತು ಸೈಬರ್ ಭದ್ರತೆಯ ಕುರಿತು ಜಾಗೃತಿ ಕಾರ್ಯಕ್ರಮ ಮಂಗಳಾ ಸಭಾಂಗಣದಲ್ಲಿ ನಡೆಯಿತು.</p>.<p>ಕೊಣಾಜೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ ಎಸ್. ಮಾತನಾಡಿ, ರ್ಯಾಗಿಂಗ್ನಿಂದಾಗಿ ಆತಂಕ, ಖಿನ್ನತೆ, ಅಥವಾ ದೀರ್ಘಕಾಲದ ಮಾನಸಿಕ ಪರಿಣಾಮಗಳು ಉಂಟಾಗುತ್ತವೆ. ರ್ಯಾಗಿಂಗ್ ಮಾಡುವುದು ಗಮನಕ್ಕೆ ಬಂದರೆ ತಕ್ಷಣ ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗೆ, ರ್ಯಾಗಿಂಗ್ ವಿರೋಧಿ ಸಮಿತಿ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.</p>.<p>ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂಗೆ ವಿದ್ಯಾವಂತರು ಮತ್ತು ವೃತ್ತಿಪರರೂ ಸಿಲುಕುತ್ತಿದ್ದಾರೆ. ಅಪರಿಚಿತ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬಾರದು ಎಂದು ಮಾಹಿತಿ ನೀಡಿದರು.</p>.<p>ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಪ್ರಶಾಂತ ನಾಯ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.</p>.<p>ವಿಶ್ವವಿದ್ಯಾಲಯದ ಎಂಪ್ಲಾಯ್ಮೆಂಟ್ ಬ್ಯೂರೊದ ಮುಖ್ಯಸ್ಥ ದಶರಥ ಪಿ.ಅಂಗಡಿ ವೃತ್ತಿ ಮಾರ್ಗದರ್ಶನ ನೀಡಿದರು. ಡಿಎಸ್ಟಿ ಪರ್ಸ್ ಲ್ಯಾಬ್ನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳ ಬಗ್ಗೆ ಪ್ರೊ.ವಿಶಾಲಾಕ್ಷಿ ಬಿ.ಅವರು ಮಾಹಿತಿ ನೀಡಿದರು. ಲವೀನಾ <a href="">ಕೆ.ಬಿ</a>. ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>