<p><strong>ಮಂಗಳೂರು</strong>: ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಎಂದು ಮಹಿಳೆಯೊಬ್ಬರಿಗೆ ನಂಬಿಸಿದ ಸೈಬರ್ ಕಳ್ಳರು ₹3.16 ಕೋಟಿ ವಂಚನೆ ಮಾಡಿರುವ ಬಗ್ಗೆ ಇಲ್ಲಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜೂನ್ 5ರಂದು ಮುಂಬೈ ಸಹಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನುಶರ್ಮ ಮತ್ತು ಸಬ್ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಎಂಬ ಹೆಸರಿನಲ್ಲಿ ಕರೆ ಮಾಡಿದ ವಂಚಕರು ನನ್ನ ಮತ್ತು ಪತಿಯ ಬ್ಯಾಂಕ್ ವಿವರ ತನಿಖೆ ಮಾಡುವ ಕಾರಣ ಹೇಳಿ, ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದರು. ನಂತರ ಮತ್ತೆ ಕರೆ ಮಾಡಿದ ಅವರು, ಜೂ.10ರಿಂದ 27ರವರೆಗೆ ನನ್ನ ಮತ್ತು ಪತಿಯ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಸಿ, ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ’ ಎಂದು ಮಹಿಳೆ ಸೆನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. </p>.<p>‘ಕರೆ ಮಾಡಿದ ವ್ಯಕ್ತಿಗಳು ನಂತರ ನನ್ನ ನಂಬರ್ ಬ್ಲಾಕ್ ಮಾಡಿದ್ದಾರೆ. ಈ ವಿಷಯವನ್ನು ಮಕ್ಕಳಿಗೆ ತಿಳಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ’ ಎಂದು ದೂರಿನಲ್ಲಿ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪತಿಯ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಮಾಡಲಾಗಿದೆ ಎಂದು ಮಹಿಳೆಯೊಬ್ಬರಿಗೆ ನಂಬಿಸಿದ ಸೈಬರ್ ಕಳ್ಳರು ₹3.16 ಕೋಟಿ ವಂಚನೆ ಮಾಡಿರುವ ಬಗ್ಗೆ ಇಲ್ಲಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜೂನ್ 5ರಂದು ಮುಂಬೈ ಸಹಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನುಶರ್ಮ ಮತ್ತು ಸಬ್ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಎಂಬ ಹೆಸರಿನಲ್ಲಿ ಕರೆ ಮಾಡಿದ ವಂಚಕರು ನನ್ನ ಮತ್ತು ಪತಿಯ ಬ್ಯಾಂಕ್ ವಿವರ ತನಿಖೆ ಮಾಡುವ ಕಾರಣ ಹೇಳಿ, ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದರು. ನಂತರ ಮತ್ತೆ ಕರೆ ಮಾಡಿದ ಅವರು, ಜೂ.10ರಿಂದ 27ರವರೆಗೆ ನನ್ನ ಮತ್ತು ಪತಿಯ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಸಿ, ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ’ ಎಂದು ಮಹಿಳೆ ಸೆನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. </p>.<p>‘ಕರೆ ಮಾಡಿದ ವ್ಯಕ್ತಿಗಳು ನಂತರ ನನ್ನ ನಂಬರ್ ಬ್ಲಾಕ್ ಮಾಡಿದ್ದಾರೆ. ಈ ವಿಷಯವನ್ನು ಮಕ್ಕಳಿಗೆ ತಿಳಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ’ ಎಂದು ದೂರಿನಲ್ಲಿ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>