ಎಸ್.ಡಿ.ಎಂ.ಸಿ. ಜಿಲ್ಲಾ ಸಮಾವೇಶ ಸಂಚಾಲಕ ಚಂದ್ರಶೇಖರ್ ಕೊಂಕಣಾಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ನಿವೃತ್ತ ಕಾರ್ಯದರ್ಶಿ ಎ. ಬಿ. ಇಬ್ರಾಹಿಂ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಅಕ್ಷರ ದಾಸೋಹ ಸಮನ್ವಯಾಧಿಕಾರಿ ಉಷಾ, ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ರಾಜ್ಯಾಧ್ಯಕ್ಷ ಮೊಯಿದ್ದೀನ್ ಕುಟ್ಟಿ, ಮಾಮಚ್ಚನ್, ಬೆಳ್ತಂಗಡಿ ಸಿಆರ್ಪಿ ಆರತಿ, ಧಾರಾವಾಡ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್, ಜನಪ್ರಿಯ ಗಾರ್ಡನ್ ಉಸ್ತುವಾರಿ ಹಾಜಿ ಇಸ್ಮಾಯಿಲ್ ವಿ.ಕೆ ಇದ್ದರು.
ನೌಫಲ್ ಕೆಬಿಎಸ್ ಕುಡ್ತಮುಗೇರು ನಿರೂಪಿಸಿದರು.