‘ನಾನು ನನ್ನ ತಂದೆಯನ್ನು ಹಲವು ವರ್ಷಗಳ ಹಿಂದೆಯೇ ಕಳೆದುಕೊಂಡಿದ್ದೇನೆ. ನಾನು ಕಣಿಯೂರು ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದರೆ, ನನ್ನ ಸಹೋದರ 2ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ನನ್ನ ಅಮ್ಮ ಪದ್ಮುಂಜ ಪ್ರೌಢಶಾಲೆಯಲ್ಲಿ ಬಿಸಿಯೂಟ ಸಿಬ್ಬಂದಿಯಾಗಿ ದುಡಿದು ನಮ್ಮನ್ನು ಸಾಕುತ್ತಿದ್ದರು. ಇದ್ದಕ್ಕಿದ್ದಂತೆ ಅವರಿಗೆ ಹೊಟ್ಟೆಯೊಳಗೆ ನೋವು ಕಾಣಿಸಿಕೊಂಡಾಗ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಅದು ಗಡ್ಡೆ ಕ್ಯಾನ್ಸರ್ ಎಂದು ತಿಳಿಯಿತು. ಎಲ್ಲೆಲ್ಲಿಂದಲೂ ಹಣ ಒಟ್ಟುಗೂಡಿಸಿ ₹ 3-4 ಲಕ್ಷ ವ್ಯಯಿಸಿ ಚಿಕಿತ್ಸೆ ಮಾಡಲಾಯಿತು. ಇದೀಗ ಮತ್ತೆ ರೋಗ ಉಲ್ಬಣಿಸಿ ಅಮ್ಮ ಹಾಸಿಗೆ ಹಿಡಿದಿದ್ದಾರೆ’ ಎಂದು ಪತ್ರದಲ್ಲಿ ಬರೆದಿದ್ದಾಳೆ.