ಇನ್ನೊಂದೆಡೆ ಅಕ್ರಮ ಮರಳು ಗಣಿಗಾರಿಕೆ ಕೂಡ ರಾಜಾರೋಷವಾಗಿ ನಡೆಯುತ್ತಿದೆ. ಇಲ್ಲಿನ ಕಡೆಶಿವಾಲಯ, ಸರಪಾಡಿ, ಆರಿಕಲ್ಲು, ಜಡ್ತಿಲ, ಸೇರಾ ಮತ್ತಿತರ ಕಡೆಗಳಲ್ಲಿ ಅಕ್ರಮ ಮರಳು ಮಾಫಿಯಾ ನಡೆಯುತ್ತಿದೆ. ಇದು ಕೂಡ ಬಿಜೆಪಿ ಬೆಂಬಲದಿಂದಲೇ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.