ಕೋವಿಡ್ ಇಳಿಮುಖವಾಗಿರುವ ಕಾರಣಕ್ಕೆ ಎರಡು ರಾಜ್ಯಗಳ ನಡುವಿನ ಸಾರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ. ಭೌತಿಕ ತರಗತಿಗಳು ಆರಂಭವಾಗಿವೆ. ಕೇರಳ ರಾಜ್ಯದ ಗಡಿ ಪ್ರದೇಶದಿಂದ ವಿದ್ಯಾಭ್ಯಾಸಕ್ಕೆ ಬರುವವರು, ಉದ್ಯೋಗಿಗಳು, ವೈದ್ಯಕೀಯ ಸೇವೆಗೆ ಬರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.