ನೆರೆಯ ಕೇರಳ ರಾಜ್ಯದಲ್ಲಿ ಪಾಸಿಟಿವಿಟಿ ದರ ಏರಿಕೆಯಾಗುತ್ತಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ ವಹಿವಾಟು, ವಿದ್ಯಾಭ್ಯಾಸ, ಉದ್ಯೋಗದ ಕಾರಣಕ್ಕೆ ಜನರು ಬರುವ ಕಾರಣ ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿದೆ ಎನ್ನಲಾಗುತ್ತಿದೆ. ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ವರದಿ ಇದ್ದರಷ್ಟೇ ಗಡಿ ಪ್ರವೇಶಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ.