ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು, ಆತನ ಪತ್ತೆಗಾಗಿ ಶೋಧ ಆರಂಭಿಸಿದ್ದರು. ಸೋಮವಾರ ಮಧ್ಯಾಹ್ನ ಕಾನ್ಸ್ಟೆಬಲ್ಗಳಾದ ಶಂಕರಪ್ಪ ಲಮಾಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಸೋಂಕಿತನನ್ನು ಪತ್ತೆಹಚ್ಚಿ, ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.