<p>ಉಜಿರೆ: ‘ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆ ಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿ ಎಲ್ಲರೂ ಶ್ರದ್ಧಾ ಭಕ್ತಿಯಿಂದ ದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆ ಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಶನಿವಾರ ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎಲ್ಲರೂ ಮನೆಯಲ್ಲಿ ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು. ಧರ್ಮಸ್ಥಳದಲ್ಲಿ ಪ್ರತಿವರ್ಷ ಭಜನಾ ತರಬೇತಿ ಕಮ್ಮಟ ಆಯೋಜಿಸುತ್ತಿದ್ದು, ಇದರಿಂದಾಗಿ ಊರಿನ ಭಜನಾ ಮಂದಿರಗಳು ಶ್ರದ್ಧಾ - ಭಕ್ತಿಯ ಧಾರ್ಮಿಕ ಚಟುವಟಿಕೆಗಳ ಕೇಂದ್ರಗಳಾಗಿ ಬೆಳೆಯುತ್ತಿವೆ, ಬೆಳಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಸಂಸ್ಕಾರ ಮೂಡಿಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.</p>.<p>ನಿತ್ಯವೂ ಮನೆಯಲ್ಲಿ ಮನೆ ದೇವರನ್ನು, ಇಷ್ಟ ದೇವರನ್ನು ಪ್ರಾರ್ಥಿಸಿದ ಬಳಿಕ ವರ್ಷಕ್ಕೊಮ್ಮೆ ವಿಶೇಷ ಸಾನ್ನಿಧ್ಯ ಇರುವ ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ, ಉಡುಪಿ ಮೊದಲಾದ ಕ್ಷೇತ್ರಗಳಿಗೆ ಹೋಗಿ ಶ್ರದ್ಧಾ-ಭಕ್ತಿಯಿಂದ ಸೇವೆ ಸಲ್ಲಿಸಬಹುದು ಎಂದು ಸಲಹೆ ನೀಡಿದರು.</p>.<p>ಬೆಂಗಳೂರು, ಮೈಸೂರು, ಹಾಸನ, ಮಂಡ್ಯ ಮೊದಲಾದ ಅನೇಕ ಊರುಗಳಿಂದ ಪ್ರತಿವರ್ಷ ಸಾವಿರಾರು ಮಂದಿ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬರುತ್ತಾರೆ. ದೇಹದ ಪಾವಿತ್ರ್ಯತೆ ಕಾಪಾಡಲು ಶಿಸ್ತಿನಿಂದ ಅವರು ಸ್ವಚ್ಛತೆಗೆ ಆದ್ಯತೆ ನೀಡಿ, ಪರಿಶುದ್ಧ ಮನ-ವಚನ- ಕಾಯದಿಂದ ಪಾದಯಾತ್ರೆ ಮಾಡಿ ತಮ್ಮ ಕಷ್ಟಗಳನ್ನೆಲ್ಲ ಪರಿಹರಿಸಿಕೊಳ್ಳುತ್ತಾರೆ. ಇಲ್ಲಿ ಬಂದ ಮೇಲೆ ಅವರಿಗೆ ಮಾನಸಿಕ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.</p>.<p>ಪಾದಯಾತ್ರಿಗಳ ಪರವಾಗಿ ಬೆಂಗಳೂರಿನ ರಮೇಶ್ ಮಾತನಾಡಿ, ಪಾದಯಾತ್ರೆಯಿಂದ ತನಗೆ ವಿಶೇಷ ಶಾಂತಿ, ನೆಮ್ಮದಿ ದೊರಕಿದೆ ಎಂದು ಹೇಳಿದರು.</p>.<p>ಅಹೋರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು. ದೇವಸ್ಥಾನ ಆವರಣದಲ್ಲಿ ಅಹೋರಾತ್ರಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನ ಮಾಡಿದರು.</p>.<p>ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ‘ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆ ಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿ ಎಲ್ಲರೂ ಶ್ರದ್ಧಾ ಭಕ್ತಿಯಿಂದ ದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆ ಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಶನಿವಾರ ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಎಲ್ಲರೂ ಮನೆಯಲ್ಲಿ ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು. ಧರ್ಮಸ್ಥಳದಲ್ಲಿ ಪ್ರತಿವರ್ಷ ಭಜನಾ ತರಬೇತಿ ಕಮ್ಮಟ ಆಯೋಜಿಸುತ್ತಿದ್ದು, ಇದರಿಂದಾಗಿ ಊರಿನ ಭಜನಾ ಮಂದಿರಗಳು ಶ್ರದ್ಧಾ - ಭಕ್ತಿಯ ಧಾರ್ಮಿಕ ಚಟುವಟಿಕೆಗಳ ಕೇಂದ್ರಗಳಾಗಿ ಬೆಳೆಯುತ್ತಿವೆ, ಬೆಳಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಸಂಸ್ಕಾರ ಮೂಡಿಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.</p>.<p>ನಿತ್ಯವೂ ಮನೆಯಲ್ಲಿ ಮನೆ ದೇವರನ್ನು, ಇಷ್ಟ ದೇವರನ್ನು ಪ್ರಾರ್ಥಿಸಿದ ಬಳಿಕ ವರ್ಷಕ್ಕೊಮ್ಮೆ ವಿಶೇಷ ಸಾನ್ನಿಧ್ಯ ಇರುವ ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ, ಉಡುಪಿ ಮೊದಲಾದ ಕ್ಷೇತ್ರಗಳಿಗೆ ಹೋಗಿ ಶ್ರದ್ಧಾ-ಭಕ್ತಿಯಿಂದ ಸೇವೆ ಸಲ್ಲಿಸಬಹುದು ಎಂದು ಸಲಹೆ ನೀಡಿದರು.</p>.<p>ಬೆಂಗಳೂರು, ಮೈಸೂರು, ಹಾಸನ, ಮಂಡ್ಯ ಮೊದಲಾದ ಅನೇಕ ಊರುಗಳಿಂದ ಪ್ರತಿವರ್ಷ ಸಾವಿರಾರು ಮಂದಿ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬರುತ್ತಾರೆ. ದೇಹದ ಪಾವಿತ್ರ್ಯತೆ ಕಾಪಾಡಲು ಶಿಸ್ತಿನಿಂದ ಅವರು ಸ್ವಚ್ಛತೆಗೆ ಆದ್ಯತೆ ನೀಡಿ, ಪರಿಶುದ್ಧ ಮನ-ವಚನ- ಕಾಯದಿಂದ ಪಾದಯಾತ್ರೆ ಮಾಡಿ ತಮ್ಮ ಕಷ್ಟಗಳನ್ನೆಲ್ಲ ಪರಿಹರಿಸಿಕೊಳ್ಳುತ್ತಾರೆ. ಇಲ್ಲಿ ಬಂದ ಮೇಲೆ ಅವರಿಗೆ ಮಾನಸಿಕ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.</p>.<p>ಪಾದಯಾತ್ರಿಗಳ ಪರವಾಗಿ ಬೆಂಗಳೂರಿನ ರಮೇಶ್ ಮಾತನಾಡಿ, ಪಾದಯಾತ್ರೆಯಿಂದ ತನಗೆ ವಿಶೇಷ ಶಾಂತಿ, ನೆಮ್ಮದಿ ದೊರಕಿದೆ ಎಂದು ಹೇಳಿದರು.</p>.<p>ಅಹೋರಾತ್ರಿ ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ಸೀಯಾಳ ಅಭಿಷೇಕ, ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು. ದೇವಸ್ಥಾನ ಆವರಣದಲ್ಲಿ ಅಹೋರಾತ್ರಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನ ಮಾಡಿದರು.</p>.<p>ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಮಾಣಿಲ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>