<p><strong>ಉಜಿರೆ:</strong> ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಒಲಿಂಪಿಕ್ಸ್ನಲ್ಲೂ ಅವಕಾಶ ನೀಡಬೇಕು ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಹೇಳಿದರು.</p>.<p>ಎಸ್ಡಿಎಂ ಪದವಿಪೂರ್ವ ಕಾಲೇಜು ಮತ್ತು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಟೂರ್ನಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಏಷಿಯನ್ ಗೇಮ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಹಾಗಾಗಿ ಒಲಿಂಪಿಕ್ಸ್ನಲ್ಲೂ ಅವಕಾಶ ಸಿಗಬೇಕು ಎಂದು ಅವರು ಒತ್ತಾಯಿಸಿದರು.</p>.<p>ಬೆಳ್ತಂಗಡಿ ಪಿಎಸ್ಐ ಮುರಳೀಧರ ನಾಯಕ್ ಮಾತನಾಡಿದರು.</p>.<p>ಎಸ್ಡಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಜೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಪೂಂಜ ವಂದಿಸಿದರು. ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ದ.ಕ.ಜಿಲ್ಲೆಯ ಪಿಯು ಕಾಲೇಜುಗಳ 9 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.</p>.<h2>ಕಸಾಯಿಖಾನೆಗೆ ದಾಳಿ: ಪ್ರಕರಣ ದಾಖಲು</h2>.<p>ಉಜಿರೆ: ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಧರ್ಮಸ್ಥಳ ಪೊಲೀಸರು ಗುರುವಾರ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.</p>.<p>ಕೊಕ್ಕಡದ ಮಲ್ಲಿಗೆಮಜಲು ಉಸ್ಮಾನ್ ಎಂಬುವರ ಅಡಿಕೆ ತೋಟದಲ್ಲಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ 10 ಕೆ.ಜಿ. ಗೋಮಾಂಸ, ತೂಕದ ಯಂತ್ರ, ಚಾಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿ ಕಿಶೋರ್, ಸಿಬ್ಬಂದಿ ದಾಳಿ ನಡೆಸಿದ್ದು, ಆರೋಪಿಗಳಾದ ಉಸ್ಮಾನ್ ಮತ್ತು ಸಲೀಂ ಪರಾರಿಯಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಒಲಿಂಪಿಕ್ಸ್ನಲ್ಲೂ ಅವಕಾಶ ನೀಡಬೇಕು ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಹೇಳಿದರು.</p>.<p>ಎಸ್ಡಿಎಂ ಪದವಿಪೂರ್ವ ಕಾಲೇಜು ಮತ್ತು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಟೂರ್ನಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಏಷಿಯನ್ ಗೇಮ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಹಾಗಾಗಿ ಒಲಿಂಪಿಕ್ಸ್ನಲ್ಲೂ ಅವಕಾಶ ಸಿಗಬೇಕು ಎಂದು ಅವರು ಒತ್ತಾಯಿಸಿದರು.</p>.<p>ಬೆಳ್ತಂಗಡಿ ಪಿಎಸ್ಐ ಮುರಳೀಧರ ನಾಯಕ್ ಮಾತನಾಡಿದರು.</p>.<p>ಎಸ್ಡಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಜೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಪೂಂಜ ವಂದಿಸಿದರು. ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.</p>.<p>ದ.ಕ.ಜಿಲ್ಲೆಯ ಪಿಯು ಕಾಲೇಜುಗಳ 9 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.</p>.<h2>ಕಸಾಯಿಖಾನೆಗೆ ದಾಳಿ: ಪ್ರಕರಣ ದಾಖಲು</h2>.<p>ಉಜಿರೆ: ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಧರ್ಮಸ್ಥಳ ಪೊಲೀಸರು ಗುರುವಾರ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.</p>.<p>ಕೊಕ್ಕಡದ ಮಲ್ಲಿಗೆಮಜಲು ಉಸ್ಮಾನ್ ಎಂಬುವರ ಅಡಿಕೆ ತೋಟದಲ್ಲಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ 10 ಕೆ.ಜಿ. ಗೋಮಾಂಸ, ತೂಕದ ಯಂತ್ರ, ಚಾಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿ ಕಿಶೋರ್, ಸಿಬ್ಬಂದಿ ದಾಳಿ ನಡೆಸಿದ್ದು, ಆರೋಪಿಗಳಾದ ಉಸ್ಮಾನ್ ಮತ್ತು ಸಲೀಂ ಪರಾರಿಯಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>