ಅಜ್ಜಾವರದ ಸಂತೋಷ್ ಅವರ ತೋಟದಲ್ಲಿದ್ದ ನೀರು ತುಂಬಿದ ಹೊಂಡಕ್ಕೆ (ಪುಟ್ಟ ಕೆರೆ) ಬಿದ್ದಿದ್ದ ಎರಡು ಮರಿಯಾನೆಗಳು ಸೇರಿ ನಾಲ್ಕು ಆನೆಗಳನ್ನು ಗುರುವಾರ ರಕ್ಷಣೆ ಮಾಡಿ ಸಮೀಪದ ಕಾಡಿಗೆ ಬಿಡಲಾಗಿತ್ತು. ಅದರಲ್ಲಿ ಮೂರು ತಿಂಗಳ ಮರಿಯಾನೆಯು ಹಿಂಡನ್ನು ಸೇರಿಕೊಳ್ಳದೇ ಅದೇ ದಿನ ಸಂಜೆ ಮತ್ತೆ ಊರಿಗೆ ಮರಳಿತ್ತು. ಅರಣ್ಯ ಇಲಾಖೆ ಸಿಬ್ಬಂದಿಯು ವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಎರಡು ದಿನಗಳಿಂದ ಅದರ ಆರೈಕೆ ಮಾಡಿದ್ದರು. ಆದರೂ ತಾಯಿ ಆನೆಯು ಮರಿಯನ್ನು ಹುಡುಕಿಕೊಂಡು ಬರಲಿಲ್ಲ.