ಪ್ರತಿ ಬುಧವಾರ ನಿಗದಿಪಡಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ಹೃದಯ ವೈಶಾಲ್ಯ’ ಶಿಬಿರ ಆಯೋಜಿಸಲಿದೆ. ವೈದ್ಯಾಧಿಕಾರಿ, ಸಮುದಾಯ ಆರೋಗ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಆಶಾ ಕಾರ್ಯಕರ್ತರು, ಅಮೃತ ಆರೋಗ್ಯ ಸಂಯೋಜಕರು, ಸಂಬಂಧಿತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಈ ಶಿಬಿರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಾರೆ.