ಮಂಗಳೂರು: ಪ್ರೀತಿಸಿದ ಹುಡುಗಿಯೊಂದಿ ಮನಸ್ತಾಪ ಮಾಡಿಕೊಂಡಿದ್ದ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದು, ಮನವೊಲಿಕೆಯ ನಂತರ ಕೆಳಗೆ ಇಳಿದು ಬಂದಿದ್ದಾನೆ.
ಕೆಂಜಾರಿನ ಸುಧೀರ್, ಅದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಅವರಿಬ್ಬರ ನಡುವೆ ಮನಸ್ತಾಪ ಆಗಿದ್ದು, ಸೋಮವಾರ ಬೆಳಿಗ್ಗೆ ಅಡ್ಯಾರ್ ಬಳಿ ಇರುವ ಮೊಬೈಲ್ ಟವರ್ ಏರಿ ಕುಳಿತಿದ್ದ. ಪ್ರೀತಿಸಿದ ಯುವತಿ ಸ್ಥಳಕ್ಕೆ ಬಂದ ನಂತರ ಆತನು ಟವರ್ನಿಂದ ಕೆಳಗೆ ಇಳಿದಿದ್ದಾನೆ.
ಯುವಕನ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಯ್ಸಳ ತಂಡದವರು ಯುವಕನನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.