<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಸುರಿದ ಮಳೆಯ ಅಬ್ಬರ ಶುಕ್ರವಾರ ತುಸು ಕಡಿಮೆಯಾಗಿದೆ. ಗುರುವಾರ ಉಕ್ಕಿ ಹರಿದಿದ್ದ ಹಳ್ಳಕೊಳ್ಳಗಳಲ್ಲೂ ನೀರಿನ ಹರಿವಿನ ಪ್ರಮಾಣ ಕಡಿಮೆ ಇತ್ತು. ನೇತ್ರಾವತಿ, ಫಲ್ಗುಣಿ, ನದಿಗಳು ತುಂಬಿ ಹರಿಯುತ್ತಿವೆ.</p>.<p>ಜುಲೈ 6ರವರೆಗೂ ನಿತ್ಯವೂ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಭಾರಿ ಮಳೆಯ ಮುನ್ಸೂಚನೆ ಇದ್ದುದರಿಂದ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಇತ್ತು. ಪಡೀಲ್–ಕಣ್ಣೂರಿನ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ಹಾಗೂ ಕೊಟ್ಟಾರ ಚೌಕಿ ಬಳಿ ಉಂಟಾಗಿದ್ದ ಪ್ರವಾಹವು ತಗ್ಗಿದೆ.</p>.<p>ಶುಕ್ರವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೇರಮಜಲುವಿನಲ್ಲಿ 158 ಮಿ.ಮೀ ಹಾಗೂ ಫಜೀರುವಿನಲ್ಲಿ 144 ಮಿ.ಮೀ, ಮೂಡುಬಿದಿರೆಯಲ್ಲಿ 139 ಮಿ.ಮೀ ಮಳೆ ದಾಖಲಾಗಿದೆ.</p>.<p>ಭಾರಿ ಮಳೆಯಿಂದಾಗಿ ಕಡಬದಲ್ಲಿ ಒಂದು ಮನೆ ಹಾನಿಗೊಂಡಿದೆ. ಮಂಗಳೂರು ಹಾಗೂ ಮೂಲ್ಕಿಯಲ್ಲಿ ತಲಾ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಸುರಿದ ಮಳೆಯ ಅಬ್ಬರ ಶುಕ್ರವಾರ ತುಸು ಕಡಿಮೆಯಾಗಿದೆ. ಗುರುವಾರ ಉಕ್ಕಿ ಹರಿದಿದ್ದ ಹಳ್ಳಕೊಳ್ಳಗಳಲ್ಲೂ ನೀರಿನ ಹರಿವಿನ ಪ್ರಮಾಣ ಕಡಿಮೆ ಇತ್ತು. ನೇತ್ರಾವತಿ, ಫಲ್ಗುಣಿ, ನದಿಗಳು ತುಂಬಿ ಹರಿಯುತ್ತಿವೆ.</p>.<p>ಜುಲೈ 6ರವರೆಗೂ ನಿತ್ಯವೂ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಭಾರಿ ಮಳೆಯ ಮುನ್ಸೂಚನೆ ಇದ್ದುದರಿಂದ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಇತ್ತು. ಪಡೀಲ್–ಕಣ್ಣೂರಿನ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ಹಾಗೂ ಕೊಟ್ಟಾರ ಚೌಕಿ ಬಳಿ ಉಂಟಾಗಿದ್ದ ಪ್ರವಾಹವು ತಗ್ಗಿದೆ.</p>.<p>ಶುಕ್ರವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೇರಮಜಲುವಿನಲ್ಲಿ 158 ಮಿ.ಮೀ ಹಾಗೂ ಫಜೀರುವಿನಲ್ಲಿ 144 ಮಿ.ಮೀ, ಮೂಡುಬಿದಿರೆಯಲ್ಲಿ 139 ಮಿ.ಮೀ ಮಳೆ ದಾಖಲಾಗಿದೆ.</p>.<p>ಭಾರಿ ಮಳೆಯಿಂದಾಗಿ ಕಡಬದಲ್ಲಿ ಒಂದು ಮನೆ ಹಾನಿಗೊಂಡಿದೆ. ಮಂಗಳೂರು ಹಾಗೂ ಮೂಲ್ಕಿಯಲ್ಲಿ ತಲಾ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>