<p><strong>ಮಂಗಳೂರು:</strong> ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ತನ್ನ ವ್ಯಾಪ್ತಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಹಾಕುವ ಸದಸ್ಯರಿಗೆ ಪ್ರತಿ ಲೀಟರ್ ಹಾಲಿಗೆ ₹1 ಹೆಚ್ಚುವರಿ ಪ್ರೋತ್ಸಾಹಧನ ನೀಡಲಿದೆ.</p><p>21.2.2026 ರಿಂದ 31.5.2026ರ ವರೆಗೆ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ ₹1 ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದಾಗಿ ಒಕ್ಕೂಟವು ನಿತ್ಯ ಅಂದಾಜು ₹4.1 ಲಕ್ಷ ಹೆಚ್ಚುವರಿ ಮೊತ್ತವನ್ನು ಹಾಗೂ ಈ ಅವಧಿಗೆ ಒಟ್ಟು ಅಂದಾಜು ₹4 ಕೋಟಿ ವಿಶೇಷ ಪ್ರೋತ್ಸಾಹಧನವನ್ನು ರೈತರಿಗೆ ಪಾವತಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.</p><p>ಉಭಯ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಹಸಿರು ಹುಲ್ಲು, ಒಣ ಹುಲ್ಲು ಕೊರತೆ ಇರುತ್ತದೆ. ರಸಮೇವು (ಸೈಲೇಜ್)ಗೆ ಅಧಿಕ ಬೆಲೆ ನೀಡಬೇಕಾಗುತ್ತದೆ. ಹೀಗಾಗಿ ಹೈನುಗಾರಿಕೆ ಮಾಡುತ್ತಿರುವವರಿಗೆ ನೆರವಾಗಲು ಈ ಯೋಜನೆ ಜಾರಿಗೊಳಿಸಲಾಗಿದೆ.</p><p>ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ ಪ್ರಸ್ತುತ ಒಕ್ಕೂಟವು ನೀಡುತ್ತಿರುವ ₹1.50 ಪ್ರೋತ್ಸಾಹಧನ ಸೇರಿ ₹40.76 ದರ ನೀಡಲಾಗುತ್ತಿದೆ. ಈಗ ಹೆಚ್ಚುವರಿ ₹1 ಪ್ರೋತ್ಸಾಹಧನ ಸೇರಿ ಗುಣಮಟ್ಟದ ಹಾಲಿಗೆ ₹41.76 ನೀಡಲಾಗುವುದು. ರೈತರು ಉತ್ತಮ ಗುಣಮಟ್ಟದ ಅಧಿಕ ಹಾಲನ್ನು ಉತ್ಪಾದಿಸಿ ಅದನ್ನು ಒಕ್ಕೂಟಕ್ಕೆ ನೀಡುವ ಮೂಲಕ ಪ್ರೋತ್ಸಾಹಧನ ಹೆಚ್ಚಳದ ಪ್ರಯೋಜನ ಪಡೆಯಬೇಕು ಎಂದು ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ತನ್ನ ವ್ಯಾಪ್ತಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಹಾಕುವ ಸದಸ್ಯರಿಗೆ ಪ್ರತಿ ಲೀಟರ್ ಹಾಲಿಗೆ ₹1 ಹೆಚ್ಚುವರಿ ಪ್ರೋತ್ಸಾಹಧನ ನೀಡಲಿದೆ.</p><p>21.2.2026 ರಿಂದ 31.5.2026ರ ವರೆಗೆ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ ₹1 ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದಾಗಿ ಒಕ್ಕೂಟವು ನಿತ್ಯ ಅಂದಾಜು ₹4.1 ಲಕ್ಷ ಹೆಚ್ಚುವರಿ ಮೊತ್ತವನ್ನು ಹಾಗೂ ಈ ಅವಧಿಗೆ ಒಟ್ಟು ಅಂದಾಜು ₹4 ಕೋಟಿ ವಿಶೇಷ ಪ್ರೋತ್ಸಾಹಧನವನ್ನು ರೈತರಿಗೆ ಪಾವತಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.</p><p>ಉಭಯ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಹಸಿರು ಹುಲ್ಲು, ಒಣ ಹುಲ್ಲು ಕೊರತೆ ಇರುತ್ತದೆ. ರಸಮೇವು (ಸೈಲೇಜ್)ಗೆ ಅಧಿಕ ಬೆಲೆ ನೀಡಬೇಕಾಗುತ್ತದೆ. ಹೀಗಾಗಿ ಹೈನುಗಾರಿಕೆ ಮಾಡುತ್ತಿರುವವರಿಗೆ ನೆರವಾಗಲು ಈ ಯೋಜನೆ ಜಾರಿಗೊಳಿಸಲಾಗಿದೆ.</p><p>ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ ಪ್ರಸ್ತುತ ಒಕ್ಕೂಟವು ನೀಡುತ್ತಿರುವ ₹1.50 ಪ್ರೋತ್ಸಾಹಧನ ಸೇರಿ ₹40.76 ದರ ನೀಡಲಾಗುತ್ತಿದೆ. ಈಗ ಹೆಚ್ಚುವರಿ ₹1 ಪ್ರೋತ್ಸಾಹಧನ ಸೇರಿ ಗುಣಮಟ್ಟದ ಹಾಲಿಗೆ ₹41.76 ನೀಡಲಾಗುವುದು. ರೈತರು ಉತ್ತಮ ಗುಣಮಟ್ಟದ ಅಧಿಕ ಹಾಲನ್ನು ಉತ್ಪಾದಿಸಿ ಅದನ್ನು ಒಕ್ಕೂಟಕ್ಕೆ ನೀಡುವ ಮೂಲಕ ಪ್ರೋತ್ಸಾಹಧನ ಹೆಚ್ಚಳದ ಪ್ರಯೋಜನ ಪಡೆಯಬೇಕು ಎಂದು ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>