<p><strong>ಮಂಗಳೂರು:</strong> ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದಲ್ಲಿ ಮಂಗಳವಾರ 5 ಲಕ್ಷ ಕೆ.ಜಿ.ಗೂ ಅಧಿಕ ಹಾಲು ಸಂಗ್ರಹಣೆಯಾಗಿದ್ದು, ಇದು ಒಕ್ಕೂಟದಲ್ಲಿ ಅತ್ಯಧಿಕ ಹಾಲಿನ ಸಂಗ್ರಹಣೆಯಲ್ಲಿ ದಾಖಲೆಯಾಗಿದೆ.</p>.<p>ಉಭಯ ಜಿಲ್ಲೆಯಲ್ಲಿ ಲಾಕ್ಡೌನ್ ಇರುವುದರಿಂದ ಹೋಟೆಲ್, ಕ್ಯಾಂಟೀನ್, ವಿದ್ಯಾ ಸಂಸ್ಥೆಗಳು ಬಂದ್ ಆಗಿದ್ದು, ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಹಾಲಿನ ಮಾರಾಟ ನಿತ್ಯ ಸುಮಾರು ಶೇ 25 ರಷ್ಟು ಕಡಿಮೆಯಾಗಿದೆ. </p>.<p>ಒಕ್ಕೂಟದ ಬೇಡಿಕೆಯನ್ನು ಪೂರೈಸಿ, ಉಳಿಕೆಯಾಗಿರುವ ಹೆಚ್ಚುವರಿ ಹಾಲನ್ನು ಪರಿವರ್ತನೆಗಾಗಿ ಪರಿವರ್ತನಾ ಘಟಕಕ್ಕೆ ಕಳುಹಿಸಲಾಗುತ್ತಿದ್ದು, ಒಕ್ಕೂಟದ ಆರ್ಥಿಕ ಪರಿಸ್ಥಿತಿಯ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ.</p>.<p>ರಾಜ್ಯದಾದ್ಯಂತ ನಿತ್ಯ 85 ಲಕ್ಷ ಲೀಟರ್ ಹಾಲಿನ ಸಂಗ್ರಹಣೆಯಾಗುತ್ತಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಕುಸಿತ ಕಂಡು ಬಂದಿದೆ. ಹೊರ ರಾಜ್ಯಗಳಲ್ಲಿ ಹಾಲಿನ ಪುಡಿಗೆ ಬೇಡಿಕೆಯೂ ಕಡಿಮೆಯಾಗಿದೆ.</p>.<p>ಸರ್ವಕಾಲಿಕ ಹಾಲಿನ ಸಂಗ್ರಹಣೆಯ ಗುರಿಯನ್ನು ತಲುಪಿರುವುದಕ್ಕೆ ಒಕ್ಕೂಟದ ಸದಸ್ಯರನ್ನು ಅಭಿನಂದಿಸುವುದಾಗಿ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದಲ್ಲಿ ಮಂಗಳವಾರ 5 ಲಕ್ಷ ಕೆ.ಜಿ.ಗೂ ಅಧಿಕ ಹಾಲು ಸಂಗ್ರಹಣೆಯಾಗಿದ್ದು, ಇದು ಒಕ್ಕೂಟದಲ್ಲಿ ಅತ್ಯಧಿಕ ಹಾಲಿನ ಸಂಗ್ರಹಣೆಯಲ್ಲಿ ದಾಖಲೆಯಾಗಿದೆ.</p>.<p>ಉಭಯ ಜಿಲ್ಲೆಯಲ್ಲಿ ಲಾಕ್ಡೌನ್ ಇರುವುದರಿಂದ ಹೋಟೆಲ್, ಕ್ಯಾಂಟೀನ್, ವಿದ್ಯಾ ಸಂಸ್ಥೆಗಳು ಬಂದ್ ಆಗಿದ್ದು, ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಹಾಲಿನ ಮಾರಾಟ ನಿತ್ಯ ಸುಮಾರು ಶೇ 25 ರಷ್ಟು ಕಡಿಮೆಯಾಗಿದೆ. </p>.<p>ಒಕ್ಕೂಟದ ಬೇಡಿಕೆಯನ್ನು ಪೂರೈಸಿ, ಉಳಿಕೆಯಾಗಿರುವ ಹೆಚ್ಚುವರಿ ಹಾಲನ್ನು ಪರಿವರ್ತನೆಗಾಗಿ ಪರಿವರ್ತನಾ ಘಟಕಕ್ಕೆ ಕಳುಹಿಸಲಾಗುತ್ತಿದ್ದು, ಒಕ್ಕೂಟದ ಆರ್ಥಿಕ ಪರಿಸ್ಥಿತಿಯ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ.</p>.<p>ರಾಜ್ಯದಾದ್ಯಂತ ನಿತ್ಯ 85 ಲಕ್ಷ ಲೀಟರ್ ಹಾಲಿನ ಸಂಗ್ರಹಣೆಯಾಗುತ್ತಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಕುಸಿತ ಕಂಡು ಬಂದಿದೆ. ಹೊರ ರಾಜ್ಯಗಳಲ್ಲಿ ಹಾಲಿನ ಪುಡಿಗೆ ಬೇಡಿಕೆಯೂ ಕಡಿಮೆಯಾಗಿದೆ.</p>.<p>ಸರ್ವಕಾಲಿಕ ಹಾಲಿನ ಸಂಗ್ರಹಣೆಯ ಗುರಿಯನ್ನು ತಲುಪಿರುವುದಕ್ಕೆ ಒಕ್ಕೂಟದ ಸದಸ್ಯರನ್ನು ಅಭಿನಂದಿಸುವುದಾಗಿ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>