ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ನಿಂದ ಇಬ್ಬರು ಮೃತಪಟ್ಟಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ ಶೇ 1.15ಕ್ಕೆ ಇಳಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸೋಂಕಿನ ಪ್ರಮಾಣ ಮತ್ತು ಚೇತರಿಕೆ ಪ್ರಮಾಣ ಇತ್ತೀಚಿನ ದಿನಗಳ ವರೆಗೂ ಏರು ಪೇರಾಗಿತ್ತು. ಆದರೆ ಈಗ ಸೋಂಕಿತರ ಪ್ರಮಾಣಕ್ಕಿಂತ ಚೇತರಿಕೆ ಆಗಿ ಆಸ್ಪತ್ರೆಯಿಂದ ಬಿಡುಗಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆ. ಆದರೂ, ಪ್ರತಿದಿನ ಸಾವು ದಾಖಲಾಗುತ್ತಿರುವುದು ಆತಂಕದ ವಿಚಾರವಾಗಿದೆ.