‘ಮರವೂರು–ಕೆಂಜಾರು ಪ್ರದೇಶದಲ್ಲಿ ಸುಮಾರು 34 ಸೆಂಟ್ಸ್ ಜಾಗದಲ್ಲಿ ಕಪಿಲಾ ಪಾರ್ಕ್ ಗೋಶಾಲೆ ಇದೆ. ಇದು ಸ್ಥಳೀಯರಿಂದ ಖರೀದಿಸಿದ ಜಮೀನಾಗಿದ್ದು, ಕೃಷಿಯೇತರ ಪರಿವರ್ತನೆ (ಎನ್ಎ) ಮಾಡಲಾಗಿದೆ. ಆದರೆ, ‘ಅದಕ್ಕೂ ಪೂರ್ವದಲ್ಲೇ ಈ ಭೂಮಿಯನ್ನು ಕೆಐಡಿಬಿಗಾಗಿ ನೋಟಿಫೈ ಮಾಡಿದ್ದು, ಈಚೆಗೆ ಕೋಸ್ಟ್ ಗಾರ್ಡ್ಗೆ ನೀಡಲಾಗಿದೆ’ ಎಂದು ಕಂದಾಯ, ಕೆಐಡಿಬಿ ಹಾಗೂ ಕೋಸ್ಟ್ ಗಾರ್ಡ್ ಹೇಳುತ್ತಿದ್ದು, ತೆರವು ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಈ ಭೂಮಿ ಮೊದಲೇ ನೋಟಿಫೈ ಆಗಿದ್ದರೆ, ಮಾರಾಟ, ಎನ್ಎ ಹೇಗೆ ಸಾಧ್ಯವಾಯಿತು? ಗೋಶಾಲೆಯ ಜಾಗವನ್ನೇ ತೆರವು ಮಾಡಲು ಉದ್ದೇಶಿಸುತ್ತಿರುವುದು ಯಾಕೆ?’ ಎಂದು ಕಪಿಲಾ ಪಾರ್ಕ್ ಮಾಲೀಕ ಪ್ರಕಾಶ್ ಶೆಟ್ಟಿ ಪ್ರಶ್ನಿಸಿದರು.