<p>ಮೂಲ್ಕಿ: ಇಲ್ಲಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು.</p>.<p>ಕ್ಷೇತ್ರದ ತಂತ್ರಿ ಶಿವರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ನಿರಂತರ ಭಜನೆ, ಶಿವರಾತ್ರಿ ಆಚರಣೆ, ಧ್ವಜಾರೋಹಣ, ದೇವರ ಬಲಿ ಸೇವೆ, ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಧಾರ್ಮಿಕ ವಿದ್ವಾಂಸ ಕೃಷ್ಣ ಭಟ್ ಪಾವಂಜೆ ಮಾರ್ಗದರ್ಶನ ನೀಡಿದರು. ಪ್ರಧಾನ ಅರ್ಚಕ ಪಿ. ವಾಸುದೇವ ಭಟ್, ಪವಿತ್ರಪಾಣಿ ಗಣೇಶ್ ಭಟ್ ದೇವರ ಸನ್ನಿಧಿಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.</p>.<p>ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಸೂರ್ಯಕುಮಾರ್ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರಕಾಶ್ ಎನ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಾನಿಲ್ ದೇವಳದ ಬ್ರಹ್ಮಕಲಶೋತ್ಸವದಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗೌರವಿಸಿದರು.</p>.<p>ಹಳೆಯಂಗಡಿ ಪಿಸಿಎ ಬ್ಯಾಂಕ್ನ ಎಸ್.ಎಸ್.ಸತೀಶ್ ಭಟ್, ಜೀವನ್ ಪ್ರಕಾಶ್ ಕಾಮೆರೊಟ್ಟು, ಸಸಿಹಿತ್ಲು ಸುರೇಶ್ ಬಂಗೇರ, ರಾಮದಾಸ್ ಪಾವಂಜೆ, ಜಗದೀಶ್ ಫಲಿಮಾರ್, ಪಿ.ಗೋಪಾಲಕೃಷ್ಣ ರಾವ್, ರಘು ಕೆ. ದೇವಾಡಿಗ, ಸುಕುಮಾರ್, ಸುಲೋಚನಾ ಮಹಾಬಲ, ಮೋಹನ್ ಸುವರ್ಣ, ಶಶೀಂದ್ರ ಎಂ. ಸಾಲ್ಯಾನ್, ಎಸ್ಕೆಪಿಎದ ಮೋಹನ್ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಲ್ಕಿ: ಇಲ್ಲಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು.</p>.<p>ಕ್ಷೇತ್ರದ ತಂತ್ರಿ ಶಿವರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ನಿರಂತರ ಭಜನೆ, ಶಿವರಾತ್ರಿ ಆಚರಣೆ, ಧ್ವಜಾರೋಹಣ, ದೇವರ ಬಲಿ ಸೇವೆ, ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಧಾರ್ಮಿಕ ವಿದ್ವಾಂಸ ಕೃಷ್ಣ ಭಟ್ ಪಾವಂಜೆ ಮಾರ್ಗದರ್ಶನ ನೀಡಿದರು. ಪ್ರಧಾನ ಅರ್ಚಕ ಪಿ. ವಾಸುದೇವ ಭಟ್, ಪವಿತ್ರಪಾಣಿ ಗಣೇಶ್ ಭಟ್ ದೇವರ ಸನ್ನಿಧಿಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.</p>.<p>ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಸೂರ್ಯಕುಮಾರ್ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪ್ರಕಾಶ್ ಎನ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಾನಿಲ್ ದೇವಳದ ಬ್ರಹ್ಮಕಲಶೋತ್ಸವದಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗೌರವಿಸಿದರು.</p>.<p>ಹಳೆಯಂಗಡಿ ಪಿಸಿಎ ಬ್ಯಾಂಕ್ನ ಎಸ್.ಎಸ್.ಸತೀಶ್ ಭಟ್, ಜೀವನ್ ಪ್ರಕಾಶ್ ಕಾಮೆರೊಟ್ಟು, ಸಸಿಹಿತ್ಲು ಸುರೇಶ್ ಬಂಗೇರ, ರಾಮದಾಸ್ ಪಾವಂಜೆ, ಜಗದೀಶ್ ಫಲಿಮಾರ್, ಪಿ.ಗೋಪಾಲಕೃಷ್ಣ ರಾವ್, ರಘು ಕೆ. ದೇವಾಡಿಗ, ಸುಕುಮಾರ್, ಸುಲೋಚನಾ ಮಹಾಬಲ, ಮೋಹನ್ ಸುವರ್ಣ, ಶಶೀಂದ್ರ ಎಂ. ಸಾಲ್ಯಾನ್, ಎಸ್ಕೆಪಿಎದ ಮೋಹನ್ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>