ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಮತ್ತು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮೂಲಕ ‘ಮಹಿಳೆಯರು, ಮಹಿಳೆಯರಿಗಾಗಿ ಮತ್ತು ಮಹಿಳೆಯರಿಂದ’ ತತ್ವದಡಿ ಅನೇಕ ಸೃಜನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ‘ಸಮೂಹ’ ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾಗಿ ನೃತ್ಯ, ನಾಟಕ, ಸಂಗೀತ, ಯಕ್ಷಗಾನ, ಸಾಹಿತ್ಯ ಮೊದಲಾದ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.