ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಜಾಗ್ರತಾ ಕ್ರಮಗಳ ಬಗ್ಗೆ ಪೋಷಕರು, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ಹೆಸರು, ವಿವರ, ಕೋವಿಡ್ನಿಂದ ತಂದೆತಾಯಿ ಕಳೆದುಕೊಂಡವರು ಹಾಗೂ ಏಕಪೋಷಕರ ಮಗುವಿನ ಸಮಗ್ರ ಮಾಹಿತಿಯನ್ನು ಕ್ರೋಡೀಕರಿಸಬೇಕು. ಮಕ್ಕಳ ಶಿಕ್ಷಣ, ಮನಸ್ಥಿತಿ ಅರಿತು ಸಹಕಾರ ನೀಡಬೇಕು ಎಂದರು.
ಕೊರೊನಾ ಸೋಂಕು ತಡೆಯುವ ಜಾಗೃತಿಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು.ಕರಪತ್ರವನ್ನು ಪ್ರತಿ ಮನೆಗೆ ತಲುಪಿಸಬೇಕು. ಮಕ್ಕಳಿಗೂ ಕೋವಿಡ್ ಪ್ರತಿರೋಧ ಚುಚ್ಚುಮದ್ದನ್ನು ನೀಡುವ ಸಾಧ್ಯತೆ ಇದ್ದು, ಯೋಜನೆ ರೂಪಿಸಬೇಕು. ಸೋಂಕು ಸಂಭವಿಸಿದರೆ ಮಕ್ಕಳ ಪ್ರಕರಣದ ವರದಿಯನ್ನು ಪ್ರತಿದಿನ ನೀಡಬೇಕು. ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸೋಂಕು ಪೀಡಿತ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ಕ್ಷೇಮವನ್ನು ವಿಚಾರಿಸಬೇಕು ಎಂದರು. ತಾಲ್ಲೂಕು ಪಟ್ಟದಲ್ಲಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.