ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರ ಸಭೆ ಶನಿವಾರ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಮಕ್ಕಳು ಕೊಠಡಿಗೆ ತಲುಪುವವರೆಗೆ ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರು,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕರ್ತರು ಮಾರ್ಗದರ್ಶನ ಮಾಡುತ್ತಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಪರೀಕ್ಷೆ ನಡೆಸುವ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಗಿದೆ. ಕೆಲವು ಕಡೆಗಳಲ್ಲಿ ಸ್ಥಳೀಯರ ಆಸಕ್ತಿಯಿಂದ ವಿಡಿಯೊಗಳನ್ನು ಮಾಡಿ, ಮಕ್ಕಳಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.