ಅಂದು ಸಂಜೆ 3ರಿಂದ 7ರವರೆಗೆ ಜಲಾಭಿಷೇಕ ನಡೆಯಲಿದೆ. ರಾತ್ರಿ 8ರಿಂದ 11ರವರೆಗೆ ಪಂಚಾಮೃತ ಅಭಿಷೇಕವು ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯಲಿದೆ. ಭಗವಾನ್ ವೀರ ನಿರ್ವಾಣ ವರ್ಷ 2550ರ ನೆನಪಿಗೆ ನಡೆಯುವ ಈ ಮಸ್ತಕಾಭಿಷೇಕದಲ್ಲಿ ರಾಜ್ಯ ಹಾಗೂ ವಿದೇಶದ ವಿವಿಧ ಭಾಗಗಳ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದರು.