ಪುತ್ತೂರು ತಾಲ್ಲೂಕಿನ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ವಂಚನೆಗೊಳಗಾದವರು. ‘ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಲ್ಲಿ ಸಂಪರ್ಕಿಸಿದ ಅಪರಿಚಿತನೊಬ್ಬ ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ, ಮೇ 8ರಿಂದ ಮೇ 10ರ ಅವಧಿಯಲ್ಲಿ ಮೂರು ಕಂತುಗಳಲ್ಲಿ ಪೋನ್ಪೇ ಮೂಲಕ ₹ 1,30,500 ಪಡೆದುಕೊಂಡಿದ್ದ., ಆ ಬಳಿಕ ಉತ್ಪನ್ನಗಳನ್ನು ಕಳುಹಿಸದೆ ವಂಚಿಸಿದ್ದಾನೆ’ ಎಂದು ಗಣೇಶ್ ಪ್ರಭು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.