ಈ ಪ್ರದೇಶದಲ್ಲೇ ಬಸ್ ತಂಗುದಾಣವಿದ್ದು, ಮಕ್ಕಳು ಹಾಗೂ ಮಹಿಳೆಯರೂ ಸೇರಿದಂತೆ ನೂರಾರು ಮಂದಿ ಬಸ್ಸಿಗಾಗಿ ಕಾದಿರುತ್ತಾರೆ. ಈ ಪರಿವರ್ತಕದ ಫ್ಯೂಸ್ಗಳಿಗೆ ಕವಚಗಳಿಲ್ಲದಿರುವುದರಿಂದ ಮಳೆಗಾಲದಲ್ಲಿ ಅಪಾಯ ಹೆಚ್ಚಿದೆ. ಸಿಡಿಲಿನ ಸಂದರ್ಭದಲ್ಲಿ ಈ ವಿದ್ಯುತ್ ಪರಿವರ್ತಕದಿಂದ ಬೆಂಕಿ ಏಳುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.