‘ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಕುದ್ರೋಳಿ ಗೋಕರ್ಣನಾಥೇಶ್ವರ ಹಾಗೂ ಮಂಗಳಾದೇವಿ ಸೇರಿದಂತೆ ಇತರ ದೇವಸ್ಥಾನಗಳಲ್ಲಿ ದಸರಾ ಆಚರಣೆ ಕುರಿತಂತೆ ಜಿಲ್ಲಾಡಳಿತ ಕಳೆದ ವರ್ಷ ನಿರ್ದಿಷ್ಟ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ ದೇವಸ್ಥಾನಗಳ ಆಡಳಿತ ಮಂಡಳಿಗಳು, ಭಕ್ತರು ಸಹಕರಿಸಿದ್ದರು. ಈ ಬಾರಿ ಕೋವಿಡ್ ಮೂರನೇ ಅಲೆ ಎದುರಾದಲ್ಲಿ ಮತ್ತೊಮ್ಮೆ ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಬೇಕಾದ ಸಂದರ್ಭವನ್ನು ತಳ್ಳಿಹಾಕುವಂತಿಲ್ಲ. ಸಮಸ್ಯೆ ಬಿಗಡಾಯಿಸದಂತೆ ನಮಗೆ ನಾವೇ ತಡೆ ಹಾಕಿಕೊಳ್ಳಬೇಕಾಗಿದೆ’ ಎಂದರು.