ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತಿವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲೂ ವೈಜ್ಞಾನಿಕ ಕಸ ವಿಂಗಡಣೆ, ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.