ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ದೊರೆತಿದೆ, ಈ ಬಗ್ಗೆ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು. ಅವರ ನೇಮಕಾತಿಗಾಗಿ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಸಭೆಗೆ ಮಾಹಿತಿ ನೀಡಿದರು. ಡಿಸಿಪಿ ಹರಿರಾಂ ಶಂಕರ್, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್ ಎಸ್.ಬಿ., ಸಮಿತಿಯ ಸದಸ್ಯರು, ಸಂಬಂಧಿಸಿದ ಅಧಿಕಾರಿಗಳು ಇದ್ದರು.