ಮಂಗಳೂರು: ಫೆಬ್ರುವರಿ 16ರ ನಸುಕಿನ ಜಾವ ಇಲ್ಲಿನ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ನಿವಾಸಿ ಗೋಪಾಲಕೃಷ್ಣ ರೈ (55) ಮತ್ತು ಅವರ ಮಗ ನಮೀಶ್ ರೈ (6) ಶವ ಉಡುಪಿ ಜಿಲ್ಲೆ ಕಟಪಾಡಿ ಸಮೀಪದ ಪಡುಕೆರೆ ಸಮುದ್ರ ಕಿನಾರೆಯಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ.