<p><strong>ಮಂಗಳೂರು</strong>: ಫೆಬ್ರುವರಿ 16ರ ನಸುಕಿನ ಜಾವ ಇಲ್ಲಿನ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ನಿವಾಸಿ ಗೋಪಾಲಕೃಷ್ಣ ರೈ (55) ಮತ್ತು ಅವರ ಮಗ ನಮೀಶ್ ರೈ (6) ಶವ ಉಡುಪಿ ಜಿಲ್ಲೆ ಕಟಪಾಡಿ ಸಮೀಪದ ಪಡುಕೆರೆ ಸಮುದ್ರ ಕಿನಾರೆಯಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ.</p>.<p>ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಗೋಪಾಲಕೃಷ್ಣ ರೈ ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಫೆ. 16ರ ನಸುಕಿನ ಜಾವ ‘ಮರಣ ಪತ್ರ’ ಬರೆದಿಟ್ಟು ಮಗನೊಂದಿಗೆ ನಾಪತ್ತೆಯಾಗಿದ್ದರು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. 12 ದಿನಗಳಾದರೂ ಸುಳಿವು ಸಿಕ್ಕಿರಲಿಲ್ಲ.</p>.<p>ಶುಕ್ರವಾರ ರಾತ್ರಿ ವೇಳೆಗೆ ಅಪ್ಪ ಮತ್ತು ಮಗನ ಮೃತ ದೇಹಗಳು ಪಡುಕೆರೆ ಕಿನಾರೆಯಲ್ಲಿ ತೇಲಿ ಬಂದಿವೆ. ಪೋಷಕರೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಇಬ್ಬರ ಗುರುತು ಪತ್ತೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಫೆಬ್ರುವರಿ 16ರ ನಸುಕಿನ ಜಾವ ಇಲ್ಲಿನ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ನಿವಾಸಿ ಗೋಪಾಲಕೃಷ್ಣ ರೈ (55) ಮತ್ತು ಅವರ ಮಗ ನಮೀಶ್ ರೈ (6) ಶವ ಉಡುಪಿ ಜಿಲ್ಲೆ ಕಟಪಾಡಿ ಸಮೀಪದ ಪಡುಕೆರೆ ಸಮುದ್ರ ಕಿನಾರೆಯಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ.</p>.<p>ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಗೋಪಾಲಕೃಷ್ಣ ರೈ ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಫೆ. 16ರ ನಸುಕಿನ ಜಾವ ‘ಮರಣ ಪತ್ರ’ ಬರೆದಿಟ್ಟು ಮಗನೊಂದಿಗೆ ನಾಪತ್ತೆಯಾಗಿದ್ದರು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. 12 ದಿನಗಳಾದರೂ ಸುಳಿವು ಸಿಕ್ಕಿರಲಿಲ್ಲ.</p>.<p>ಶುಕ್ರವಾರ ರಾತ್ರಿ ವೇಳೆಗೆ ಅಪ್ಪ ಮತ್ತು ಮಗನ ಮೃತ ದೇಹಗಳು ಪಡುಕೆರೆ ಕಿನಾರೆಯಲ್ಲಿ ತೇಲಿ ಬಂದಿವೆ. ಪೋಷಕರೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಇಬ್ಬರ ಗುರುತು ಪತ್ತೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>