<p><strong>ಬಂಟ್ವಾಳ:</strong> ಮದ್ಯಪಾನ ಮತ್ತಿತರ ದುಶ್ಚಟದಿಂದ ಮುಕ್ತರಾಗಲು ದೃಢ ಸಂಕಲ್ಪ ಅಗತ್ಯವಿದೆ. ಮದ್ಯವರ್ಜನ ಶಿಬಿರಾರ್ಥಿಗಳು ಯಾವುದೇ ಸಂದರ್ಭದಲ್ಲಿ ಕುಡಿತದ ಸಹವಾಸಕ್ಕೆ ಹೋಗದೆ ಮನಸ್ಸು ಚಂಚಲವಾಗದಂತೆ ಪ್ರತಿದಿನ ಸ್ವಾಭಿಮಾನದ ಬದುಕು ನಡೆಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಮಂಗಳವಾರ ಸಮಾರೋಪಗೊಂಡ 1,540ನೇ ಮದ್ಯವರ್ಜನ ಶಿಬಿರದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.</p>.<p>ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ಪರಿಶ್ರಮ ಸಮಾಜಕ್ಕೆ ಸಹಕಾರಿ ಆಗಿದೆ ಎಂದರು.</p>.<p>ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷ ರೊನಾಲ್ಡ್ ಡಿಸೋಜ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು.<br />ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಡಾ. ವಸಂತ ಬಾಳಿಗ, ಅಧ್ಯಕ್ಷ ಐತಪ್ಪ ಆಳ್ವ ಸುಜೀರುಗುತ್ತು, ಸಮಿತಿ ಗೌರವ ಸಲಹೆಗಾರ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮನ್ಮಥ ರಾಜ್ ಜೈನ್ ಇದ್ದರು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕುಟುಂಬ ದಿನ ನಡೆಸಿಕೊಟ್ಟರು.<br />ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ಯೋಜನಾಧಿಕಾರಿ ಜಯಾನಂದ ಪಿ. , ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಮದ್ಯಪಾನ ಮತ್ತಿತರ ದುಶ್ಚಟದಿಂದ ಮುಕ್ತರಾಗಲು ದೃಢ ಸಂಕಲ್ಪ ಅಗತ್ಯವಿದೆ. ಮದ್ಯವರ್ಜನ ಶಿಬಿರಾರ್ಥಿಗಳು ಯಾವುದೇ ಸಂದರ್ಭದಲ್ಲಿ ಕುಡಿತದ ಸಹವಾಸಕ್ಕೆ ಹೋಗದೆ ಮನಸ್ಸು ಚಂಚಲವಾಗದಂತೆ ಪ್ರತಿದಿನ ಸ್ವಾಭಿಮಾನದ ಬದುಕು ನಡೆಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಮಂಗಳವಾರ ಸಮಾರೋಪಗೊಂಡ 1,540ನೇ ಮದ್ಯವರ್ಜನ ಶಿಬಿರದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.</p>.<p>ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ಪರಿಶ್ರಮ ಸಮಾಜಕ್ಕೆ ಸಹಕಾರಿ ಆಗಿದೆ ಎಂದರು.</p>.<p>ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷ ರೊನಾಲ್ಡ್ ಡಿಸೋಜ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು.<br />ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಡಾ. ವಸಂತ ಬಾಳಿಗ, ಅಧ್ಯಕ್ಷ ಐತಪ್ಪ ಆಳ್ವ ಸುಜೀರುಗುತ್ತು, ಸಮಿತಿ ಗೌರವ ಸಲಹೆಗಾರ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮನ್ಮಥ ರಾಜ್ ಜೈನ್ ಇದ್ದರು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕುಟುಂಬ ದಿನ ನಡೆಸಿಕೊಟ್ಟರು.<br />ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ಯೋಜನಾಧಿಕಾರಿ ಜಯಾನಂದ ಪಿ. , ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>