ಗುರುವಾರ ರಾತ್ರಿ ವಿಷರೀತ ಮದ್ಯ ಸೇವಿಸಿ ಮನೆಗೆ ಬಂದಿದ್ದ ಚೇತನ್ ಶೆಟ್ಟಿ, ತಡರಾತ್ರಿ 2 ಸುಮಾರಿಗೆ ಮನೆಯಲ್ಲಿ ಗಲಾಟೆ ಮಾಡಿ ತಾಯಿ ಉಮಾವತಿಯೊಂದಿಗೆ ಜಗಳವಾಡಿ ಬಳಿಕ ನೆರೆಯ ನಿವಾಸಿ ಯೂಸುಫ್ ಎಂಬವರ ಮನೆಗೆ ಹೋಗಿ ಬಾಗಿಲು ಬಡಿಯುತ್ತಾ, ಕಿಟಕಿ ಬಾಗಿಲುಗಳಿಗೆ ಹೊಡೆಯುತ್ತಾ ದಾಂಧಲೆ ಎಬ್ಬಿಸಿದ್ದರು. ಈ ವಿಚಾರವನ್ನು ಯೂಸುಫ್ ಅವರು ಉಮಾವತಿಗೆ ಕರೆ ಮಾಡಿ, ಮಗನನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರು.