ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕದ ವ್ಯಕ್ತಿ ದುಬೈನಲ್ಲಿ ಸಾವು

Last Updated 10 ಮಾರ್ಚ್ 2021, 2:21 IST
ಅಕ್ಷರ ಗಾತ್ರ

ವಿಟ್ಲ/ಬಂಟ್ವಾಳ: ಕಲ್ಲಡ್ಕ ಬೋಳಂತೂರು ನಾರ್ಶದ ನಿವಾಸಿ ಮುತ್ತಲಿಬ್ ಅವರು ದುಬೈಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಖಚಿತಪಡಿಸಿದ್ದಾರೆ.

ಹಲವಾರು ದಿನಗಳಿಂದ ಮುತ್ತಲಿಬ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಯಾರಿಗೂ ಸಂಪರ್ಕಕ್ಕೆ ಸಿಗದಿದ್ದುದರಿಂದ ಕುಟುಂಬಸ್ಥರು ಆತಂಕಕ್ಕೀಡಾಗಿದ್ದರು.

ದುಬೈನ ಅಲ್-ರಫಾದಲ್ಲಿ ಭಾನುವಾರ ಅವರ ಮೃತದೇಹ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದರು. ಮುತ್ತಲಿಬ್ ಅವರ ಪಾಸ್‌ಪೋರ್ಟ್ ಸಂಖ್ಯೆ ಆಧರಿಸಿ, ಭಾರತೀಯ ಪ್ರಜೆ ಎಂದು ಖಚಿತ ಪಡಿಸಿಕೊಂಡ ಅಲ್ಲಿನ ಪೊಲೀಸರು, ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದ್ದರು. ಮೃತದೇಹ ಪತ್ತೆಗೆ ಕರ್ನಾಟಕ ಕಲ್ಚರಲ್ ಫೋರಂ (ಕೆಸಿಎಫ್) ಸಹಕಾರ ನೀಡಿತ್ತು. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಡಳಿತದ ಮೂಲಕ ವಿಳಾಸ ಪತ್ತೆ ಹಚ್ಚ ಲಾಯಿತು. ಶವ ದುಬೈನ ರಾಶೀದ್ ಆಸ್ಪತ್ರೆಯಲ್ಲಿದೆ.

ಮುತ್ತಲಿಬ್ ಬೋಳಂತೂರು ನಾರ್ಶದ ಸೂಫಿ ಮುಕ್ರೀಕರ ಪುತ್ರನಾಗಿದ್ದು, ಈ ಹಿಂದೆ ಧಾರ್ಮಿಕ ಗುರುವಾಗಿ ಕೆಲಸ ಮಾಡಿದ್ದರು. ಆನಂತರ ಎಂಜಿನಿಯರಿಂಗ್ ಪದವಿ ಪಡೆದು, ಕೆಲಸಕ್ಕೆ ಸೇರಿಕೊಂಡಿದ್ದರು. ಮುತ್ತಲಿಬ್ ನಾರ್ಶ ಅಂಕಣ ಬರಹಗಾರರಾಗಿದ್ದರು. ‘ವಿಜಯಕಿರಣ’, ‘ಮದರಂಗಿ’ ಪತ್ರಿಕೆಗೆ ಅಂಕಣ ಬರೆದು ಪ್ರಸಿದ್ಧಿ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT