<p><strong>ಪುತ್ತೂರು:</strong>ತಾಲ್ಲೂಕಿನ ಮಾಡ್ನೂರು ಗ್ರಾಮದ ಮದ್ಲ ಸಮೀಪದ ಗುಡ್ಡದಲ್ಲಿರುವ ಬಾವಿಗೆ ಗುರುವಾರ ಜಿಂಕೆಯೊಂದು ಬಿದ್ದಿದ್ದು, ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.</p>.<p>ಕಾಡಿನಿಂದ ಬಂದಿದ್ದ ಜಿಂಕೆಯನ್ನು ನಾಯಿಯೊಂದು ಬೆನ್ನಟ್ಟಿತ್ತು. ಆಗ ಹೆದರಿ ಓಡಿದ ಜಿಂಕೆ ಗುಡ್ಡದ ಬಾವಿಗೆ ಬಿದ್ದು ನೀರಿನಲ್ಲಿ ಒದ್ದಾಡತೊಡಗಿತ್ತು. ಈ ಕುರಿತು ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳೀಯರ ಸಹಕಾರದೊಂದಿಗೆ ಬಾವಿಯಲ್ಲಿದ್ದ ಜಿಂಕೆಯನ್ನು ಹಗ್ಗದ ಸಹಾಯದಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟರು.</p>.<p>ಅರಣ್ಯ ಇಲಾಖೆಯ ಉಪ ಅರಣ್ಯಾಧಿಕಾರಿ ಲೋಕೇಶ್, ಅರಣ್ಯ ರಕ್ಷಕರಾದ ಮೋಹನ್, ಉಮೇಶ್, ವೆಂಕಟೇಶ್, ದೀಪಕ್, ಅಗ್ನಿಶಾಮಕದ ದಳದ ಶಂಕರ್, ರುಕ್ಮಯ ಗೌಡ, ಕುಶಾಲಪ್ಪ, ತೌಸಿಫ್, ಚಾಲಕ ಮೋಹನ್ ಜಾದವ್, ಗೃಹರಕ್ಷಕದಳದ ನಿಖಿಲ್ರಾಜ್ ಆಕಾಶ್ ಮತ್ತಿತರರು ಜಿಂಕೆಯ ರಕ್ಷಣಾ ಕಾರ್ಯಾಚರಣೆ ನಡೆಸಿದಿದ್ದರು. ಸ್ಥಳೀಯರು ಸಾಥ್ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong>ತಾಲ್ಲೂಕಿನ ಮಾಡ್ನೂರು ಗ್ರಾಮದ ಮದ್ಲ ಸಮೀಪದ ಗುಡ್ಡದಲ್ಲಿರುವ ಬಾವಿಗೆ ಗುರುವಾರ ಜಿಂಕೆಯೊಂದು ಬಿದ್ದಿದ್ದು, ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.</p>.<p>ಕಾಡಿನಿಂದ ಬಂದಿದ್ದ ಜಿಂಕೆಯನ್ನು ನಾಯಿಯೊಂದು ಬೆನ್ನಟ್ಟಿತ್ತು. ಆಗ ಹೆದರಿ ಓಡಿದ ಜಿಂಕೆ ಗುಡ್ಡದ ಬಾವಿಗೆ ಬಿದ್ದು ನೀರಿನಲ್ಲಿ ಒದ್ದಾಡತೊಡಗಿತ್ತು. ಈ ಕುರಿತು ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳೀಯರ ಸಹಕಾರದೊಂದಿಗೆ ಬಾವಿಯಲ್ಲಿದ್ದ ಜಿಂಕೆಯನ್ನು ಹಗ್ಗದ ಸಹಾಯದಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟರು.</p>.<p>ಅರಣ್ಯ ಇಲಾಖೆಯ ಉಪ ಅರಣ್ಯಾಧಿಕಾರಿ ಲೋಕೇಶ್, ಅರಣ್ಯ ರಕ್ಷಕರಾದ ಮೋಹನ್, ಉಮೇಶ್, ವೆಂಕಟೇಶ್, ದೀಪಕ್, ಅಗ್ನಿಶಾಮಕದ ದಳದ ಶಂಕರ್, ರುಕ್ಮಯ ಗೌಡ, ಕುಶಾಲಪ್ಪ, ತೌಸಿಫ್, ಚಾಲಕ ಮೋಹನ್ ಜಾದವ್, ಗೃಹರಕ್ಷಕದಳದ ನಿಖಿಲ್ರಾಜ್ ಆಕಾಶ್ ಮತ್ತಿತರರು ಜಿಂಕೆಯ ರಕ್ಷಣಾ ಕಾರ್ಯಾಚರಣೆ ನಡೆಸಿದಿದ್ದರು. ಸ್ಥಳೀಯರು ಸಾಥ್ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>