<p><strong>ಉಳ್ಳಾಲ:</strong> ವೈದ್ಯರೊಬ್ಬರು ಖರೀದಿಸಿದ ಲ್ಯಾಪ್ಟಾಪ್ನಲ್ಲಿ ದೋಷ ಕಂಡುಬಂದರೂ ಸೂಕ್ತವಾಗಿ ಸ್ಪಂದಿಸದ ಲ್ಯಾಪ್ಟಾಪ್ ತಯಾರಿಕಾ ಕಂಪನಿಗೆ ಉತ್ಪನ್ನದ ಖರೀದಿ ಮೌಲ್ಯವನ್ನು ಶೇ 6ರ ಬಡ್ಡಿದರ ಸಹಿತ 45 ದಿನಗಳೊಳಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.</p>.<p>ತಪ್ಪಿದರೆ ಕಂಪನಿ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿದೆ.</p>.<p>ಉಳ್ಳಾಲ ತಾಲ್ಲೂಕು ಮುಡಿಪಿನ ವೈದ್ಯ ಡಾ.ಅರುಣ್ ಪ್ರಸಾದ್ ವರು ₹1,09,990 ಮೌಲ್ಯದ ಲ್ಯಾಪ್ಟಾಪ್ ಖರೀದಿಸಿದ್ದರು. ಒಂದು ವರ್ಷದ ವಾರಂಟಿ ಜತೆಗೆ ₹3,498 ಮೌಲ್ಯದ ವಿಸ್ತರಿತ ವಾರಂಟಿ ಪಡೆದಿದ್ದರು. ಖರೀದಿಸಿದ 6 ತಿಂಗಳಿನೊಳಗೆ ಲ್ಯಾಪ್ಟಾಪ್ನಲ್ಲಿ ನಿರಂತರ ತಾಂತ್ರಿಕ ದೋಷ ಕಂಡುಬಂದವು. ಸಂಬಂಧಿಸಿದ ಸಂಸ್ಥೆಯವರಿಗೆ ದೂರವಾಣಿ, ಇಮೇಲ್, ಟ್ವೀಟ್ ಮೂಲಕ ದೂರು ಸಲ್ಲಿಸಿದರು. ಆದರೂ, ಲ್ಯಾಪ್ಟಾಪ್ ರಿಪೇರಿ, ಖರೀದಿಸಿದ ಮೌಲ್ಯ ಹಿಂತಿರುಗಿಸಲು ಕಂಪನಿ ಮುಂದಾಗಲಿಲ್ಲ.</p>.<p>ದೂರುದಾರರ ಟ್ವಿಟರ್ ಖಾತೆಯನ್ನು ಕಂಪನಿ ಬ್ಲಾಕ್ ಮಾಡಿತು. ಬಳಿಕ ವೈದ್ಯ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೊರೆ ಹೋದರು.</p>.<p>ದೂರುದಾರರು ಮತ್ತು ಪ್ರತಿವಾದಿಗಳ ಸಾಕ್ಷಿ ವಿಚಾರಣೆ ನಂತರ ವಾದ ಆಲಿಸಿದ ಗ್ರಾಹಕ ನ್ಯಾಯಾಲಯ ಸದ್ರಿ ಲ್ಯಾಪ್ಟಾಪ್ನಲ್ಲಿ ತಯಾರಿಕಾ ದೋಷ ಇದೆ ಎಂಬ ದೂರುದಾರರ ವಾದ ಎತ್ತಿ ಹಿಡಿದಿದೆ. ಲ್ಯಾಪ್ಟಾಪ್ ಖರೀದಿಸಿದ ಮೌಲ್ಯ ₹1,09,990 ಮತ್ತು ಶೇ 6ರ ಬಡ್ಡಿ ದರದಲ್ಲಿ 45 ದಿನಗಳೊಳಗಾಗಿ ಹಿಂತಿರುಗಿಸುವಂತೆ ಆದೇಶ ನೀಡಿದೆ.</p>.<p>ಪ್ರತಿವಾದಿಗಳು ದೂರುದಾರರಿಗೆ ಸೇವಾ ನ್ಯೂನತೆ, ಮಾನಸಿಕ ತೊಂದರೆಗಾಗಿ ₹ 30 ಸಾವಿರ ಮತ್ತು ವ್ಯಾಜ್ಯ ವೆಚ್ಚಕ್ಕಾಗಿ ₹ 10 ಸಾವಿರ ನೀಡಲು ಆದೇಶ ನೀಡಿದೆ. ತಪ್ಪಿದರೆ ಕಂಪನಿಯ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯವು ಸೂಚಿಸಿದೆ. ದೂರುದಾರರ ಪರವಾಗಿ ಮಂಗಳೂರಿನ ಅಪೆಕ್ಸ್ ಜ್ಯೂರಿಸ್ ವಕೀಲ ಅರವಿಂದ ವಿ.ವಾದಿಸಿದರು. ಸುಳ್ಯದ ಶಾಂತಿ ಇನ್ಫೋಟೆಕ್ನ ಪ್ರಶಾಂತ ಎಸ್ಟಿ ತಜ್ಞರ ಅಭಿಮತ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ವೈದ್ಯರೊಬ್ಬರು ಖರೀದಿಸಿದ ಲ್ಯಾಪ್ಟಾಪ್ನಲ್ಲಿ ದೋಷ ಕಂಡುಬಂದರೂ ಸೂಕ್ತವಾಗಿ ಸ್ಪಂದಿಸದ ಲ್ಯಾಪ್ಟಾಪ್ ತಯಾರಿಕಾ ಕಂಪನಿಗೆ ಉತ್ಪನ್ನದ ಖರೀದಿ ಮೌಲ್ಯವನ್ನು ಶೇ 6ರ ಬಡ್ಡಿದರ ಸಹಿತ 45 ದಿನಗಳೊಳಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.</p>.<p>ತಪ್ಪಿದರೆ ಕಂಪನಿ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿದೆ.</p>.<p>ಉಳ್ಳಾಲ ತಾಲ್ಲೂಕು ಮುಡಿಪಿನ ವೈದ್ಯ ಡಾ.ಅರುಣ್ ಪ್ರಸಾದ್ ವರು ₹1,09,990 ಮೌಲ್ಯದ ಲ್ಯಾಪ್ಟಾಪ್ ಖರೀದಿಸಿದ್ದರು. ಒಂದು ವರ್ಷದ ವಾರಂಟಿ ಜತೆಗೆ ₹3,498 ಮೌಲ್ಯದ ವಿಸ್ತರಿತ ವಾರಂಟಿ ಪಡೆದಿದ್ದರು. ಖರೀದಿಸಿದ 6 ತಿಂಗಳಿನೊಳಗೆ ಲ್ಯಾಪ್ಟಾಪ್ನಲ್ಲಿ ನಿರಂತರ ತಾಂತ್ರಿಕ ದೋಷ ಕಂಡುಬಂದವು. ಸಂಬಂಧಿಸಿದ ಸಂಸ್ಥೆಯವರಿಗೆ ದೂರವಾಣಿ, ಇಮೇಲ್, ಟ್ವೀಟ್ ಮೂಲಕ ದೂರು ಸಲ್ಲಿಸಿದರು. ಆದರೂ, ಲ್ಯಾಪ್ಟಾಪ್ ರಿಪೇರಿ, ಖರೀದಿಸಿದ ಮೌಲ್ಯ ಹಿಂತಿರುಗಿಸಲು ಕಂಪನಿ ಮುಂದಾಗಲಿಲ್ಲ.</p>.<p>ದೂರುದಾರರ ಟ್ವಿಟರ್ ಖಾತೆಯನ್ನು ಕಂಪನಿ ಬ್ಲಾಕ್ ಮಾಡಿತು. ಬಳಿಕ ವೈದ್ಯ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೊರೆ ಹೋದರು.</p>.<p>ದೂರುದಾರರು ಮತ್ತು ಪ್ರತಿವಾದಿಗಳ ಸಾಕ್ಷಿ ವಿಚಾರಣೆ ನಂತರ ವಾದ ಆಲಿಸಿದ ಗ್ರಾಹಕ ನ್ಯಾಯಾಲಯ ಸದ್ರಿ ಲ್ಯಾಪ್ಟಾಪ್ನಲ್ಲಿ ತಯಾರಿಕಾ ದೋಷ ಇದೆ ಎಂಬ ದೂರುದಾರರ ವಾದ ಎತ್ತಿ ಹಿಡಿದಿದೆ. ಲ್ಯಾಪ್ಟಾಪ್ ಖರೀದಿಸಿದ ಮೌಲ್ಯ ₹1,09,990 ಮತ್ತು ಶೇ 6ರ ಬಡ್ಡಿ ದರದಲ್ಲಿ 45 ದಿನಗಳೊಳಗಾಗಿ ಹಿಂತಿರುಗಿಸುವಂತೆ ಆದೇಶ ನೀಡಿದೆ.</p>.<p>ಪ್ರತಿವಾದಿಗಳು ದೂರುದಾರರಿಗೆ ಸೇವಾ ನ್ಯೂನತೆ, ಮಾನಸಿಕ ತೊಂದರೆಗಾಗಿ ₹ 30 ಸಾವಿರ ಮತ್ತು ವ್ಯಾಜ್ಯ ವೆಚ್ಚಕ್ಕಾಗಿ ₹ 10 ಸಾವಿರ ನೀಡಲು ಆದೇಶ ನೀಡಿದೆ. ತಪ್ಪಿದರೆ ಕಂಪನಿಯ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯವು ಸೂಚಿಸಿದೆ. ದೂರುದಾರರ ಪರವಾಗಿ ಮಂಗಳೂರಿನ ಅಪೆಕ್ಸ್ ಜ್ಯೂರಿಸ್ ವಕೀಲ ಅರವಿಂದ ವಿ.ವಾದಿಸಿದರು. ಸುಳ್ಯದ ಶಾಂತಿ ಇನ್ಫೋಟೆಕ್ನ ಪ್ರಶಾಂತ ಎಸ್ಟಿ ತಜ್ಞರ ಅಭಿಮತ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>