ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ರಮೆಶ್ ಬೋಧಿ, ‘ಡಿಸಿ ಮನ್ನಾ ಜಾಗವನ್ನು ಪರಿಶಿಷ್ಟ ಜಾತಿ, ಪಂಗಡವದರಿಗೆ ಹಂಚಲು 2014ರಲ್ಲಿ ಆಗಿನ ಜಿಲ್ಲಾಧಿಕಾರಿ ಅದೇಶ ಮಾಡಿದ್ದರು. ಕರ್ನಾಟಕ ಭೂ ಮಂಜುರಾತಿ ಕಾಯ್ದೆ 1969ಕ್ಕೆ ಸೂಕ್ತ ತಿದ್ದುಪಡಿ ಆಗದ ಕಾರಣ ಆದೇಶ ಅನುಷ್ಠಾನಕ್ಕೆ ತೊಡಕಾಗಿದೆ. ಸದ್ರಿ ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕೆಂದು ಮದ್ರಾಸ್ ಪ್ರಾಂತ್ಯಕ್ಕೊಳಪಡುವ ಭಟ್ಕಳ, ಹೊನ್ನಾವರ, ಕುಮಟಾ, ಕುಂದಾಪುರ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶೃಂಗೇರಿ, ಮಡಿಕೇರಿ, ಕಾಸರಗೋಡು ಶಾಸಕರಿಗೆ ಮನವಿ ಮಾಡಲಾಗಿದೆ. ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿ ಡಿ.ಸಿ ಮನ್ನಾ ಜಾಗಕ್ಕೆ ಕಾನೂನು ತಿದ್ದುಪಡಿ ತಂದು ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗುವಂತಾಗಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.