ಪುತ್ತೂರು: ‘ಮಸೂದ್, ಫಾಝಿಲ್ ಮತ್ತು ಜಲೀಲ್ ಕೃಷ್ಣಾಪುರ ಹತ್ಯೆ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಿದ್ಧರಾಮಯ್ಯ ಅವರು ನಮ್ಮ ಸರ್ಕಾರ ಆಡಳಿತಕ್ಕೆ ಬಂದಲ್ಲಿ ಈ ಕುಟುಂಬಗಳಿಗೆ ಪರಿಹಾರ ಒದಗಿಸುವ ಮತ್ತು ತನಿಖೆ ನಡೆಸುವ ಭರವಸೆಯನ್ನು ನೀಡಿದ್ದು, ಈಗ ಅವರೇ ಮುಖ್ಯಮಂತ್ರಿ ಆಗಿರುವುದರಿಂದ ಈ ಭರವಸೆಗಳನ್ನು ಈಡೇರಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಅವರು ಆಗ್ರಹಿಸಿದರು.