<p><strong>ಉಪ್ಪಿನಂಗಡಿ:</strong> ‘ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವ ಚತುಷ್ಪಥ ರಸ್ತೆ ಕಾಮಗಾರಿಯ ಬದಿಯಲ್ಲಿ ರಾಘವೇಂದ್ರ ನಾಯಕ್ ಎಂಬುವರು ಅಕ್ರಮವಾಗಿ ನಿರ್ಮಿಸಿರುವ ಶೆಡ್ ತೆರವು ಮಾಡಬೇಕು’ಎಂದು ಅಜರುದ್ದೀನ್ ಎಂಬುವರು ಉಪ್ಪಿನಂಗಡಿ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಿದ್ದಾರೆ.</p>.<p>‘ಕುಮಾರಧಾರಾ ಸೇತುವೆ ಬಳಿಯಲ್ಲಿ ತಗಡು ಶೀಟ್ ಹಾಕಿ ಶೆಡ್ ನಿರ್ಮಿಸಲಾಗಿದೆ. ಈ ಜಾಗವು ಹೆದ್ದಾರಿ ವ್ಯಾಪ್ತಿಯಲ್ಲೇ ಇದೆ. ಹೆದ್ದಾರಿ ವ್ಯಾಪ್ತಿಯ ಬದಿಯಲ್ಲಿ ಕಟ್ಟಡಗಳಿಗೆ ಅನುಮತಿ ನೀಡಬಾರದು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಲಾಗಿದೆ. ಈ ಕಟ್ಟಡಕ್ಕೆ ಪರವಾನಗಿ ಕೋರಿ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಆ ಅರ್ಜಿಯನ್ನು ಮಾನ್ಯ ಮಾಡಬಾರದು’ ಎಂದು ಅವರು ತಿಳಿಸಿದ್ದಾರೆ.</p>.<p>‘ರಾಘವೇಂದ್ರ ನಾಯಕ್ ಎಂಬುವರು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದು, ಷೆಡ್ ಜಾಗ ಪಟ್ಟಾ ಜಾಗದಲ್ಲಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ಹೆದ್ದಾರಿಯಿಂದ 15 ಮೀಟರ್ ಅಂತರದಲ್ಲಿದ್ದು, ಅರ್ಜಿ ತಿರಸ್ಕರಿಸಲಾಗಿದೆ’ ಎಂದು ಉಪ್ಪಿನಂಗಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ‘ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವ ಚತುಷ್ಪಥ ರಸ್ತೆ ಕಾಮಗಾರಿಯ ಬದಿಯಲ್ಲಿ ರಾಘವೇಂದ್ರ ನಾಯಕ್ ಎಂಬುವರು ಅಕ್ರಮವಾಗಿ ನಿರ್ಮಿಸಿರುವ ಶೆಡ್ ತೆರವು ಮಾಡಬೇಕು’ಎಂದು ಅಜರುದ್ದೀನ್ ಎಂಬುವರು ಉಪ್ಪಿನಂಗಡಿ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಿದ್ದಾರೆ.</p>.<p>‘ಕುಮಾರಧಾರಾ ಸೇತುವೆ ಬಳಿಯಲ್ಲಿ ತಗಡು ಶೀಟ್ ಹಾಕಿ ಶೆಡ್ ನಿರ್ಮಿಸಲಾಗಿದೆ. ಈ ಜಾಗವು ಹೆದ್ದಾರಿ ವ್ಯಾಪ್ತಿಯಲ್ಲೇ ಇದೆ. ಹೆದ್ದಾರಿ ವ್ಯಾಪ್ತಿಯ ಬದಿಯಲ್ಲಿ ಕಟ್ಟಡಗಳಿಗೆ ಅನುಮತಿ ನೀಡಬಾರದು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಲಾಗಿದೆ. ಈ ಕಟ್ಟಡಕ್ಕೆ ಪರವಾನಗಿ ಕೋರಿ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಆ ಅರ್ಜಿಯನ್ನು ಮಾನ್ಯ ಮಾಡಬಾರದು’ ಎಂದು ಅವರು ತಿಳಿಸಿದ್ದಾರೆ.</p>.<p>‘ರಾಘವೇಂದ್ರ ನಾಯಕ್ ಎಂಬುವರು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದು, ಷೆಡ್ ಜಾಗ ಪಟ್ಟಾ ಜಾಗದಲ್ಲಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ಹೆದ್ದಾರಿಯಿಂದ 15 ಮೀಟರ್ ಅಂತರದಲ್ಲಿದ್ದು, ಅರ್ಜಿ ತಿರಸ್ಕರಿಸಲಾಗಿದೆ’ ಎಂದು ಉಪ್ಪಿನಂಗಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>