ಪುತ್ತೂರು ನಗರದ ಮುಖ್ಯ ರಸ್ತೆಯ ಗಾಂಧಿಕಟ್ಟೆಯ ಸಮೀಪ, ಅರುಣಾ ಕಲಾ ಮಂದಿರದ ಮುಂಭಾಗ, ಸಚಿನ್ ಟ್ರೇಡರ್ಸ್ ಹಾಗೂ ಡಾ.ಗೌರಿ ಪೈ ಮನೆಯ ಮುಂಭಾಗ, ತೆಂಕಿಲದ ವಿವೇಕಾನಂದ ಶಾಲೆಗೆ ಹೋಗುವ ಇಳಿಜಾರು ಭಾಗದ ಕಾಂಕ್ರೀಟ್ ರಸ್ತೆ ಹಾಳಾಗಿದ್ದು, ಪ್ರಾಣಾಪಾಯ ಸಂಭವಿಸುವ ರೀತಿಯಲ್ಲಿದೆ. ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ಈ ಅಪಾಯಕಾರಿ ರಸ್ತೆಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.