<p>ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಡೆಂಗಿ ರೋಗ ಹರಡುವ ಈಡಿಸ್ ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲಕರ ವಾತಾವರಣ ರೂಪುಗೊಳ್ಳುತ್ತಿದೆ. ಈ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯುವ ಮೂಲಕ ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಾರ್ತಾ ಇಲಾಖೆಯ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಡೆಂಗಿ ನಿಯಂತ್ರಣ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.</p>.<p>'ಈಡೀಸ್ ಸೊಳ್ಳೆ ಜೀವಿತಾವಧಿಯಲ್ಲಿ ಆರು ಸಾವಿರದಷ್ಟು ಮೊಟ್ಟೆಗಳನ್ನು ಇಡಬಲ್ಲುದು. ಈ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣವೇ ಡೆಂಗಿ ತಡೆಗೆ ಪರಿಣಾಮಕಾರಿ ವಿಧಾನ. ಇದಕ್ಕಾಗಿ ಮನೆಯ ಸುತ್ತ ಮುತ್ತ ಸ್ವಚ್ಛ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡಲು ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಲಾರ್ವಾ ಸಮೀಕ್ಷೆ ನಡೆಸಲಾಗುತ್ತದೆ. ಈ ಸಲುವಾಗಿ ಮನೆ ಮನೆಗೆ ಭೇಟಿ ನೀಡುವ ಆರೋಗ್ಯ ಕಾರ್ಯಕರ್ತರಿಗೆ ಸಹಕರಿಸಿ’ ಎಂದು ಅವರು ಕೋರಿದರು. </p>.<p>ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನಚಂದ್ರ, ‘ಜಿಲ್ಲೆಯಲ್ಲಿ ಈ ವರ್ಷ ಡೆಂಗಿಯ 211 ಪ್ರಕರಣಗಳು ಪತ್ತೆಯಾಗಿವೆ. ಸದ್ಯಕ್ಕೆ 29 ಮಂದಿ ಡೆಂಗಿ ಹೊಂದಿದ್ದಾರೆ’ ಎಂದರು.</p>.<p>‘ಬಾಟಲಿ ಮುಚ್ಚಳದಲ್ಲಿ ನಿಲ್ಲುವ ನೀರು ಕೂಡಾ ಸೊಳ್ಳೆ ಉತ್ಪತ್ತಿಗೆ ನೆರವಾಗಬಹುದು. ಮನೆ ಒಳಗೆ ಸೊಳ್ಳೆ ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸುವುದು ಕಷ್ಟ. ಈ ಸೊಳ್ಳೆಗಳ ಮೊಟ್ಟೆ ಎರಡು ವರ್ಷ ಜೀವಂತವಿರುತ್ತದೆ. ನೀರಿನ ಸಂಪರ್ಕ ಸಿಕ್ಕಾಗ ಅದರಿಂದ ಸೊಳ್ಳೆ ಉತ್ಪತ್ತಿಯಾಗುತ್ತದೆ. ನೀರು ಸಂಗ್ರಹಿಸುವ ತೊಟ್ಟಿಗಳನ್ನು ವಾರಕ್ಕೆ ಒಮ್ಮೆಯಾದರೂ ತಿಕ್ಕಿ ತೊಳೆದು ಸ್ವಚ್ಛಗೊಳಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಈ ಸೊಳ್ಳೆ ಹಗಲಿನಲ್ಲಿ ಸಕ್ರಿಯವಾಗಿರುತ್ತದೆ. ಸೊಳ್ಳೆ ಕಡಿತದಿಂದ ರಕ್ಷಣೆಗೆ ಕಹಿಬೇವಿನ ಎಣ್ಣೆ, ಲಿಂಬೆಹುಲ್ಲಿನ ಎಣ್ಣೆಯನ್ನು ಮೈಗೆ ಹಚ್ಚಬಹುದು’ ಎಂದರು.</p>.<p>ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಭಾಗವಹಿಸಿದ್ದರು.</p>.<p>ಡೆಂಗಿ ಲಕ್ಷಣಗಳು: ಇದ್ದಕ್ಕಿದ್ದಂತೆ ತೀವ್ರ ಜ್ವರ, ಮೈ–ಕೈ ನೋವು, ಕೀಲು ನೋವು, ತೀವ್ರ ತಲೆನೋವು, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು, ಉಲ್ಬಣದ ಸ್ಥಿತಿಯಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ವಾಕರಿಕೆ, ವಾಂತಿ.</p>.<p><strong>ದಕ್ಷಿಣ ಕನ್ನಡ: ಡೆಂಗಿ ಪ್ರಕರಣಗಳ ವಿವರ</strong> ವರ್ಷ;ಪ್ರಕರಣಗಳು 2020;239 2021;295 2022;388 2023;566 2024;211 –0– </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಡೆಂಗಿ ರೋಗ ಹರಡುವ ಈಡಿಸ್ ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲಕರ ವಾತಾವರಣ ರೂಪುಗೊಳ್ಳುತ್ತಿದೆ. ಈ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯುವ ಮೂಲಕ ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಾರ್ತಾ ಇಲಾಖೆಯ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಡೆಂಗಿ ನಿಯಂತ್ರಣ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.</p>.<p>'ಈಡೀಸ್ ಸೊಳ್ಳೆ ಜೀವಿತಾವಧಿಯಲ್ಲಿ ಆರು ಸಾವಿರದಷ್ಟು ಮೊಟ್ಟೆಗಳನ್ನು ಇಡಬಲ್ಲುದು. ಈ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣವೇ ಡೆಂಗಿ ತಡೆಗೆ ಪರಿಣಾಮಕಾರಿ ವಿಧಾನ. ಇದಕ್ಕಾಗಿ ಮನೆಯ ಸುತ್ತ ಮುತ್ತ ಸ್ವಚ್ಛ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡಲು ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಲಾರ್ವಾ ಸಮೀಕ್ಷೆ ನಡೆಸಲಾಗುತ್ತದೆ. ಈ ಸಲುವಾಗಿ ಮನೆ ಮನೆಗೆ ಭೇಟಿ ನೀಡುವ ಆರೋಗ್ಯ ಕಾರ್ಯಕರ್ತರಿಗೆ ಸಹಕರಿಸಿ’ ಎಂದು ಅವರು ಕೋರಿದರು. </p>.<p>ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನಚಂದ್ರ, ‘ಜಿಲ್ಲೆಯಲ್ಲಿ ಈ ವರ್ಷ ಡೆಂಗಿಯ 211 ಪ್ರಕರಣಗಳು ಪತ್ತೆಯಾಗಿವೆ. ಸದ್ಯಕ್ಕೆ 29 ಮಂದಿ ಡೆಂಗಿ ಹೊಂದಿದ್ದಾರೆ’ ಎಂದರು.</p>.<p>‘ಬಾಟಲಿ ಮುಚ್ಚಳದಲ್ಲಿ ನಿಲ್ಲುವ ನೀರು ಕೂಡಾ ಸೊಳ್ಳೆ ಉತ್ಪತ್ತಿಗೆ ನೆರವಾಗಬಹುದು. ಮನೆ ಒಳಗೆ ಸೊಳ್ಳೆ ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸುವುದು ಕಷ್ಟ. ಈ ಸೊಳ್ಳೆಗಳ ಮೊಟ್ಟೆ ಎರಡು ವರ್ಷ ಜೀವಂತವಿರುತ್ತದೆ. ನೀರಿನ ಸಂಪರ್ಕ ಸಿಕ್ಕಾಗ ಅದರಿಂದ ಸೊಳ್ಳೆ ಉತ್ಪತ್ತಿಯಾಗುತ್ತದೆ. ನೀರು ಸಂಗ್ರಹಿಸುವ ತೊಟ್ಟಿಗಳನ್ನು ವಾರಕ್ಕೆ ಒಮ್ಮೆಯಾದರೂ ತಿಕ್ಕಿ ತೊಳೆದು ಸ್ವಚ್ಛಗೊಳಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಈ ಸೊಳ್ಳೆ ಹಗಲಿನಲ್ಲಿ ಸಕ್ರಿಯವಾಗಿರುತ್ತದೆ. ಸೊಳ್ಳೆ ಕಡಿತದಿಂದ ರಕ್ಷಣೆಗೆ ಕಹಿಬೇವಿನ ಎಣ್ಣೆ, ಲಿಂಬೆಹುಲ್ಲಿನ ಎಣ್ಣೆಯನ್ನು ಮೈಗೆ ಹಚ್ಚಬಹುದು’ ಎಂದರು.</p>.<p>ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಭಾಗವಹಿಸಿದ್ದರು.</p>.<p>ಡೆಂಗಿ ಲಕ್ಷಣಗಳು: ಇದ್ದಕ್ಕಿದ್ದಂತೆ ತೀವ್ರ ಜ್ವರ, ಮೈ–ಕೈ ನೋವು, ಕೀಲು ನೋವು, ತೀವ್ರ ತಲೆನೋವು, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು, ಉಲ್ಬಣದ ಸ್ಥಿತಿಯಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ವಾಕರಿಕೆ, ವಾಂತಿ.</p>.<p><strong>ದಕ್ಷಿಣ ಕನ್ನಡ: ಡೆಂಗಿ ಪ್ರಕರಣಗಳ ವಿವರ</strong> ವರ್ಷ;ಪ್ರಕರಣಗಳು 2020;239 2021;295 2022;388 2023;566 2024;211 –0– </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>