ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಿತ್ರಾಜ್ ವಿರುದ್ಧ ಗಡಿಪಾರು ಆದೇಶ ಮಾಡಿದರೆ ಪ್ರತಿಭಟನೆ ನಡೆಸುವ ಜತೆಗೆ ಕಾನೂನು ಹೋರಾಟ ಮಾಡಲಾಗುವುದು. ಹಿಂದುತ್ವವಾದಿ ಸಂಘಟನೆಗಳ ವಿರುದ್ಧ ನಿರಂತರ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದಮನಿಸಲು ಯತ್ನಿಸುತ್ತಿರುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದರು.