<p><strong>ಮಂಗಳೂರು</strong>: ಕಿನ್ನಿಗೋಳಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿ ಹೊಡೆದು ಬಿದ್ದಿದ್ದು, ತಾಯಿ ರಿಕ್ಷಾದ ಅಡಿಯಲ್ಲಿ ಸಿಲುಕಿದ್ದನ್ನು ಕಂಡ ಪುತ್ರಿ ವೈಭವಿ, ತಕ್ಷಣ ಓಡಿ ಬಂದು ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿಯ ಕಾರ್ಯವನ್ನು ಮೆಚ್ಚಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಮ್ಮ ಕಚೇರಿಗೆ ಕರೆಸಿಕೊಂಡು ಸನ್ಮಾನಿಸಿದರು.</p>.<p>ವೈಭವಿಗೆ ಪೇಟ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿ, ಬಾಲಕಿಯ ಸಮಯ ಪ್ರಜ್ಞೆ, ಧೈರ್ಯ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳು ಇಂತಹ ಗುಣ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಇದ್ದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಿನ್ನಿಗೋಳಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿ ಹೊಡೆದು ಬಿದ್ದಿದ್ದು, ತಾಯಿ ರಿಕ್ಷಾದ ಅಡಿಯಲ್ಲಿ ಸಿಲುಕಿದ್ದನ್ನು ಕಂಡ ಪುತ್ರಿ ವೈಭವಿ, ತಕ್ಷಣ ಓಡಿ ಬಂದು ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿಯ ಕಾರ್ಯವನ್ನು ಮೆಚ್ಚಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಮ್ಮ ಕಚೇರಿಗೆ ಕರೆಸಿಕೊಂಡು ಸನ್ಮಾನಿಸಿದರು.</p>.<p>ವೈಭವಿಗೆ ಪೇಟ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿ, ಬಾಲಕಿಯ ಸಮಯ ಪ್ರಜ್ಞೆ, ಧೈರ್ಯ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳು ಇಂತಹ ಗುಣ ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಇದ್ದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>