<p><strong>ಮಂಗಳೂರು:</strong> ‘ಬುಧವಾರ ಬೆಳಿಗ್ಗೆ ನಗರದ ಮೀನು ಮಾರುಕಟ್ಟೆಗೆ ಭೇಟಿ ನೀಡಿದಾಗ ಅರ್ಧ ಗಂಟೆಯಲ್ಲಿ 8 ಮಂದಿ ಬಾಲ ಕಾರ್ಮಿಕರನ್ನು ಪತ್ತೆ ಮಾಡಿದ್ದೇವೆ. 2 ವರ್ಷಗಳಲ್ಲಿ ಕೇವಲ ಇಬ್ಬರು ಬಾಲ ಕಾರ್ಮಿಕರನ್ನು ಪತ್ತೆ ಮಾಡಿರುವುದು ಅನುಮಾನ ಮೂಡಿಸುತ್ತದೆ. ಇಬ್ಬರನ್ನು ಪತ್ತೆ ಹಚ್ಚಲು ಕಾರ್ಮಿಕ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ವರ್ಷವಿಡೀ ಸರ್ಕಾರಿ ವೇತನ ಕೊಡಬೇಕೇ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಅಂತೋನಿ ಸೆಬಾಸ್ಟಿಯನ್ ಖಾರವಾಗಿ ಪ್ರಶ್ನಿಸಿದರು.</p>.<p>ನಗರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ’ನಿಮ್ಮನ್ನು ಬೇರೆ ಇಲಾಖೆಗೆ ಏಕೆ ವರ್ಗಾಯಿಸಬಾರದು’ ಎಂದು ಕೇಳಿದರು.</p>.<p><strong>ಪತ್ತೆಯಾಗದ 55 ಮಕ್ಕಳು:</strong><br />‘ಜಿಲ್ಲೆಯಲ್ಲಿ 2017 ರಿಂದ 2020 ರವರೆಗೆ 177 ಮಕ್ಕಳು ನಾಪತ್ತೆಯಾಗಿದ್ದಾರೆ. ಅವರಲ್ಲಿ 122 ಮಂದಿ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಉಳಿದ 55 ಮಕ್ಕಳ ಪತ್ತೆ ಇನ್ನೂ ಆಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಆ ಮಕ್ಕಳು ಮಾನವ ಕಳ್ಳಸಾಗಣೆ, ಕೊಲೆ ಇತ್ಯಾದಿಗಳಿಗೆ ಒಳಗಾಗಿರುವ ಸಾಧ್ಯತೆ ಇದೆ. ಈ ಪ್ರಕರಣಗಳ ತನಿಖೆ ಯಾವ ಹಂತದಲ್ಲಿದೆ? ಆ ಮಕ್ಕಳ ತಂದೆ- ತಾಯಿಗೆ ಏನು ಉತ್ತರ ಕೊಡ್ತೀರಾ’ ಎಂದು ಅಂತೋನಿ ಸೆಬಾಸ್ಟಿಯನ್, ಸದಸ್ಯ ಪರಶುರಾಮ್ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಬುಧವಾರ ಬೆಳಿಗ್ಗೆ ನಗರದ ಮೀನು ಮಾರುಕಟ್ಟೆಗೆ ಭೇಟಿ ನೀಡಿದಾಗ ಅರ್ಧ ಗಂಟೆಯಲ್ಲಿ 8 ಮಂದಿ ಬಾಲ ಕಾರ್ಮಿಕರನ್ನು ಪತ್ತೆ ಮಾಡಿದ್ದೇವೆ. 2 ವರ್ಷಗಳಲ್ಲಿ ಕೇವಲ ಇಬ್ಬರು ಬಾಲ ಕಾರ್ಮಿಕರನ್ನು ಪತ್ತೆ ಮಾಡಿರುವುದು ಅನುಮಾನ ಮೂಡಿಸುತ್ತದೆ. ಇಬ್ಬರನ್ನು ಪತ್ತೆ ಹಚ್ಚಲು ಕಾರ್ಮಿಕ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ವರ್ಷವಿಡೀ ಸರ್ಕಾರಿ ವೇತನ ಕೊಡಬೇಕೇ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಅಂತೋನಿ ಸೆಬಾಸ್ಟಿಯನ್ ಖಾರವಾಗಿ ಪ್ರಶ್ನಿಸಿದರು.</p>.<p>ನಗರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ’ನಿಮ್ಮನ್ನು ಬೇರೆ ಇಲಾಖೆಗೆ ಏಕೆ ವರ್ಗಾಯಿಸಬಾರದು’ ಎಂದು ಕೇಳಿದರು.</p>.<p><strong>ಪತ್ತೆಯಾಗದ 55 ಮಕ್ಕಳು:</strong><br />‘ಜಿಲ್ಲೆಯಲ್ಲಿ 2017 ರಿಂದ 2020 ರವರೆಗೆ 177 ಮಕ್ಕಳು ನಾಪತ್ತೆಯಾಗಿದ್ದಾರೆ. ಅವರಲ್ಲಿ 122 ಮಂದಿ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಉಳಿದ 55 ಮಕ್ಕಳ ಪತ್ತೆ ಇನ್ನೂ ಆಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಆ ಮಕ್ಕಳು ಮಾನವ ಕಳ್ಳಸಾಗಣೆ, ಕೊಲೆ ಇತ್ಯಾದಿಗಳಿಗೆ ಒಳಗಾಗಿರುವ ಸಾಧ್ಯತೆ ಇದೆ. ಈ ಪ್ರಕರಣಗಳ ತನಿಖೆ ಯಾವ ಹಂತದಲ್ಲಿದೆ? ಆ ಮಕ್ಕಳ ತಂದೆ- ತಾಯಿಗೆ ಏನು ಉತ್ತರ ಕೊಡ್ತೀರಾ’ ಎಂದು ಅಂತೋನಿ ಸೆಬಾಸ್ಟಿಯನ್, ಸದಸ್ಯ ಪರಶುರಾಮ್ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>