ರಾಜ್ಯದಲ್ಲಿ ಒಟ್ಟು 2,400 ಹಾಸ್ಟೆಲ್ಗಳು ಇದ್ದು, 1.20 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಪ್ರವೇಶಕ್ಕೆ ಕಾಯುತ್ತಿದ್ದಾರೆ. ವಿದ್ಯಾಸಿರಿ ಯೋಜನೆಯಡಿ ₹145 ಕೋಟಿ, ರಾಜ್ಯದಲ್ಲಿ 50 ಕನಕದಾಸ ಹಾಸ್ಟೆಲ್ ತೆರೆಯಲು ₹ 3.50 ಕೋಟಿ, ಶೈಕ್ಷಣಿಕ ಸಂಸ್ಥೆಗಳ ಪ್ರಧಾನ ಐದು ನಗರಗಳಲ್ಲಿ ದೀನ್ ದಯಾಳ್ ಉಪಾಧ್ಯಾಯ ಹೆಸರಿನಲ್ಲಿ ತಲಾ ಒಂದು ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು. ಇನ್ನು ಎರಡು ವರ್ಷಗಳಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಯೋಜನೆ ಹೊಂದಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಇದ್ದರು.