<p><strong>ಸುಬ್ರಹಣ್ಯ</strong>: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಷಷ್ಠಿಯ ದಿನವಾದ ಶುಕ್ರವಾರ ದೇವಸ್ಥಾನದಲ್ಲಿ 58 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.</p><p>ಗೋವು ನೈವೇದ್ಯ ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳುವ ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.</p><p>ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತರ ಮಾರ್ಗದರ್ಶನ<br>ದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತ 432 ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯ ಹಾಕಲಾಯಿತು. ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನ ಪ್ರಸಾದವನ್ನು<br>ತಿಂದವು.</p><p>ಹಸುಗಳು ತಿಂದ ಅನ್ನಪ್ರಸಾದದ ಮೇಲೆ ದೇವಳದ ಎದುರಿನ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಎಲ್ಲ ವಯೋಮಾನದ ಭಕ್ತರು ಸ್ವಯಂಪ್ರೇರಿತರಾಗಿ ಉರುಳು ಸೇವೆ ಕೈಗೊಂಡರು</p><p> ಗೋವು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇವರ ಪ್ರಸಾದ ಮತ್ತು ಪ್ರಸಾದ ಭೋಜನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹಣ್ಯ</strong>: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಷಷ್ಠಿಯ ದಿನವಾದ ಶುಕ್ರವಾರ ದೇವಸ್ಥಾನದಲ್ಲಿ 58 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.</p><p>ಗೋವು ನೈವೇದ್ಯ ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳುವ ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.</p><p>ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತರ ಮಾರ್ಗದರ್ಶನ<br>ದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತ 432 ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯ ಹಾಕಲಾಯಿತು. ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನ ಪ್ರಸಾದವನ್ನು<br>ತಿಂದವು.</p><p>ಹಸುಗಳು ತಿಂದ ಅನ್ನಪ್ರಸಾದದ ಮೇಲೆ ದೇವಳದ ಎದುರಿನ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಎಲ್ಲ ವಯೋಮಾನದ ಭಕ್ತರು ಸ್ವಯಂಪ್ರೇರಿತರಾಗಿ ಉರುಳು ಸೇವೆ ಕೈಗೊಂಡರು</p><p> ಗೋವು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇವರ ಪ್ರಸಾದ ಮತ್ತು ಪ್ರಸಾದ ಭೋಜನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>