‘ಕಟೀಲು ಮೇಳದ ಪ್ರದರ್ಶನವನ್ನು ಕೂಡ ಮುಂದಿನ ತಿರುಗಾಟದಿಂದಲೇ ಕಾಲಮಿತಿಗೊಳಪಡಿಸಲಾಗುವುದು ಎಂಬ ಮಾಹಿತಿ ದೊರೆತಿದೆ. ಭಕ್ತರ ಭಾವನೆ ದಾಖಲಿಸಲು ಈ ಸಭೆ ನಡೆಸಿದ್ದೇವೆ. ಇಲ್ಲಿ ಚರ್ಚೆಯಾದ ವಿಚಾರಗಳನ್ನು ಮೇಳದ ಆಡಳಿತ ಮಂಡಳಿ, ಜನಪ್ರತಿನಿಧಿಗಳು, ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುತ್ತೇವೆ’ ಎಂದು ಸೇವಾರ್ಥಿ ಅಶೋಕ್ ಕೃಷ್ಣಾಪುರ ತಿಳಿಸಿದರು.