‘ದೈವವು ಹಿಂದೂ ಧರ್ಮದ ಆಚರಣೆ ಅಲ್ಲ‘ ಎಂಬ ನಟ ಚೇತನ್ ಅವರ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಧರ್ಮದ ಭಾಗ ಹೌದೋ ಅಲ್ಲವೋ ನನಗೆ ಗೊತ್ತಿಲ್ಲ. ನಮ್ಮ ಜಿಲ್ಲೆಯ ಮೂಲಸ್ವಭಾವ ಅರಿಯದೇ ಮಾತನಾಡುವುದು ಸರಿಯಲ್ಲ. ಧರ್ಮದ ಮೂಲ ಎಲ್ಲಿಯೂ ಸಿಗುವುದಿಲ್ಲ. ನಂಬಿಕೆ, ಆಚರಣೆ ಸ್ವಾಭಾವಿಕವಾಗಿ ಬೆಳೆದು ಬಂದಿವೆ. ದೈವಾರಾಧನೆ ಮೇಲೆ ನಮ್ಮಗೆ ನಂಬಿಕೆ ಇದೆ. ಇದನ್ನು ಧರ್ಮದ ಜೊತೆ ತಳಕುಹಾಕಿ ವಿಮರ್ಶೆ ಮಾಡುವ ಅಗತ್ಯವಿಲ್ಲ’ ಎಂದರು.