ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ 74ನೇ ಜನ್ಮದಿನವನ್ನು ಶುಕ್ರವಾರ ಧರ್ಮಸ್ಥಳದಲ್ಲಿ ಸರಳವಾಗಿ ಆಚರಿಸಲಾಯಿತು.
ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ಅಭಿಮಾನಿಗಳು ಹೆಗ್ಗಡೆ ಅವರಿಗೆ ಜನ್ಮದಿನದ ಶುಭಾಶಯ ಅರ್ಪಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಡಿ.ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಗ್ಗಡೆ ಅವರಿಗೆ ಶುಭಾಶಯ ಸಲ್ಲಿಸಿದರು.
ಹೆಗ್ಗಡೆ ಅವರಿಗೆ ದೂರವಾಣಿ, ವಿದ್ಯುದಂಚೆ, ಪತ್ರಗಳ ಮೂಲಕವೂ ಶುಭಾಶಯಗಳು ಹರಿದು ಬಂದಿವೆ.