ಗುರುವಾರ ನಡೆದ ಸಮವಸರಣದಲ್ಲಿ ಅವರು ಮಾತನಾಡಿದರು. ಬಾಹುಬಲಿ ಸ್ವಾಮಿಗೆ ರಾತ್ರಿ ಮಸ್ತಕಾಭಿಷೇಕ ಮಾಡುವುದು ಶಾಸ್ತ್ರಸಮ್ಮತವಾಗಿದೆ. ಇದರಿಂದ ಯಾವುದೇ ದೋಷವಿಲ್ಲ. ಹಿಂಸೆ ಆಗುವುದಿಲ್ಲ. ನಿತ್ಯವೂ ಅಡುಗೆ ಮಾಡುವಾಗ, ಬಸದಿ ಜೀರ್ಣೋದ್ಧಾರ ಮಾಡುವಾಗಲೂ ಪ್ರಾಣಿ ಹಿಂಸೆ ಆಗುತ್ತದೆ. ಆದರೆ, ಅಭಿಪ್ರಾಯ, ಸಂಕಲ್ಪ, ಉದ್ದೇಶ ಪರಿಶುದ್ಧವಾಗಿದ್ದರೆ ಹಿಂಸೆ ಆಗುವುದಿಲ್ಲ ಎಂದು ಜಿನಸೇನಾಚಾರ್ಯರ ಮಹಾಪುರಾಣದಲ್ಲಿ ಹೇಳಲಾಗಿದೆ. ಹಾಗಾಗಿ ಕಾರ್ಕಳ ಮತ್ತು ವೇಣೂರಿನಲ್ಲಿ ರಾತ್ರಿ ಮಸ್ತಕಾಭಿಷೇಕ ನಡೆಸುವುದು ಶಾಸ್ತ್ರ ಸಮ್ಮತವಾಗಿದೆ ಎಂದರು.