ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ, ‘ಹಳ್ಳಿಗಳಲ್ಲಿ ಹಸೆ, ರಂಗೋಲಿ, ಕಸೂತಿ ಕಲೆ ಮುಂತಾದ ಅನೇಕ ಕಲಾ ನೈಪುಣ್ಯಗಳು ಜನ ಜೀವನದೊಂದಿಗೆ ಬೆಸೆದಿದ್ದವು. ಕಾಲ ಕಳೆದಂತೆ ಇವೆಲ್ಲ ತೆರೆಮರೆಗೆ ಸರಿದಿದ್ದು, ಇವುಗಳ ಪುನರುಜ್ಜೀವಗೊಳಿಸುವ ಪ್ರಕ್ರಿಯೆ ನಡೆಯಬೇಕಿದೆ. ನಮ್ಮ ನೆಲದ ಕಲಾ ವೈಭವವಕ್ಕೆ ಇಂತಹ ಶಿಬಿರಗಳು ಕನ್ನಡಿಯಾಗಲಿದೆ. ಮಂಜೂಷಾ ವಸ್ತು ಸಂಗ್ರಹಾಲಯದ ಮೂಲಕ ಪ್ರಾಚೀನ ಕಲೆಗಳ ಮಾಹಿತಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ’ ಎಂದರು.